
ಪಾಟಲೀಪುತ್ರ (ಬಿಹಾರ) – ಬಿಹಾರದಲ್ಲಿ ಅಪಘಾತದಲ್ಲಿ ಮೃತಪಟ್ಟ ಒಬ್ಬ ವ್ಯಕ್ತಿಯ ಶವವನ್ನು ಪೊಲೀಸರು ಸೇತುವೆಯಿಂದ ಹೊಳೆಗೆ ಎಸೆದಿರುವ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಂದರ್ಭದಲ್ಲಿ ಸ್ಥಳೀಯ ನಾಗರಿಕರು ಶಾಂತವಾಗಿ ಈ ದೃಶ್ಯವನ್ನು ವೀಕ್ಷಿಸುತ್ತಿರುವುದನ್ನು ಕಾಣಬಹುದು. (ತಪ್ಪು ವಿಷಯಗಳನ್ನು ವಿರೋಧಿಸಲು ನಾಗರಿಕರಲ್ಲಿ ಧೈರ್ಯ ಇಲ್ಲದಿರುವುದು ಅತಿದೊಡ್ಡ ಪ್ರಜಾಪ್ರಭುತ್ವವಾಗಿರುವ ದೇಶಕ್ಕೆ ನಾಚಿಕೆಗೇಡಿನ ಸಂಗತಿ ! – ಸಂಪಾದಕರು) ಈ ಘಟನೆ ಅಕ್ಟೋಬರ್ 8 ರಂದು ಬಿಹಾರದ ಮುಜಫ್ಫರಪುರದ ಫಾಕುಲಿ ಒಪಿ ಪ್ರದೇಶದಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಶವದ ಕೆಲವು ಭಾಗಗಳು ಮತ್ತು ಬಟ್ಟೆಗಳು ಒಟ್ಟಿಗೆ ಅಂಟಿಕೊಂಡಿತ್ತು. ಅದನ್ನು ತೆಗೆಯಲು ಸಾಧ್ಯವಾಗದ ಕಾರಣ ಪಕ್ಕದ ಹೊಳೆಗೆ ಎಸೆಯಲಾಗಿದೆ. (ಆ ಸ್ಥಳದಲ್ಲಿ ಒಬ್ಬ ಪೋಲೀಸ್ ಅಥವಾ ಯಾವುದಾದರೂ ನಾಯಕನಿಗೆ ಅಪಘಾತವಾಗಿದ್ದರೆ, ಪೊಲೀಸರು ಇಂತಹುದೇ ಕೃತ್ಯವನ್ನು ಮಾಡುತ್ತಿದ್ದರೇ ? – ಸಂಪಾದಕರು)
ಸಂಪಾದಕೀಯ ನಿಲುವುಇಂತಹವರನ್ನು ಪೊಲೀಸರು ಎನ್ನಬೇಕೋ ಅಥವಾ ಕಟುಕರು ಎನ್ನಬೇಕೊ ? ಇಂತಹ ಪೋಲೀಸರನ್ನು ಬಂಧಿಸಿ ಜೈಲಿಗೆ ಹಾಕಬೇಕು ! |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !