
ನವ ದೆಹಲಿ – ಭಾರತ ಮತ್ತು ಚೀನಾ ಸೇನೆಗಳ ನಡುವೆ ‘ಕಾರ್ಪ್ಸ್ ಕಮಾಂಡರ್’ ಹಂತದ 20ನೇ ಸುತ್ತಿನ ಚರ್ಚೆಯು ಅಕ್ಟೋಬರ್ 9 ಮತ್ತು 10 ರಂದು ಲಡಾಖ್ ಸೆಕ್ಟರ್ನ ಚುಶುಲ್-ಮೊಲ್ಡೊ ಬಳಿ ನಡೆಯಿತು. ಈ ಸಂದರ್ಭದಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಈ ಸಭೆಯಲ್ಲಿ ಭಾರತ ಮತ್ತು ಚೀನಾ ನಡುವಿನ ವಾಸ್ತವಿಕ ನಿಯಂತ್ರಣ ರೇಖೆ ಮತ್ತು ಇತರ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ಲಡಾಖನ ಡೆಪಸಾಂಗ್ ಮತ್ತು ಡೆಮ್ಚೋಕ್ನಿಂದ ಸೈನ್ಯವನ್ನು ಹಿಂತೆಗೆದುಕೊಳ್ಳುವಂತೆ ಭಾರತೀಯ ಸೈನ್ಯಾಧಿಕಾರಿಗಳು ಚೀನಾದ ಮೇಲೆ ಒತ್ತಡ ಹೇರಿದರು. ಭಾರತ ಮತ್ತು ಚೀನಾ ದೇಶಗಳು ಗಡಿಭಾಗದಲ್ಲಿ ಶಾಂತಿ ಕಾಪಾಡಲು ಒಪ್ಪಿಕೊಂಡಿವೆ. ಎರಡೂ ದೇಶಗಳು ಮುಕ್ತವಾಗಿ ತಮ್ಮ ವಿಚಾರಗಳನ್ನು ಮಂಡಿಸಿದೆ.
(ಸೌಜನ್ಯ – Prabhasakshi)
ಸಂಪಾದಕೀಯ ನಿಲುವುಚೀನಾವು ಗಡಿಯಲ್ಲಿ ಶಾಂತಿ ಕಾಪಾಡಲು ಒಪ್ಪಿಗೆ ಸೂಚಿಸಿದ್ದರೂ. ಅದರ ಮೇಲೆ ವಿಶ್ವಾಸವಿಡಲು ಸಾಧ್ಯವಿಲ್ಲದ ಕಾರಣ ಭಾರತ ಸದಾ ಎಚ್ಚರಿಕೆಯಿಂದ ಇರಬೇಕು ! |
ಭಾರತದ ಮೇಲೆ ಒತ್ತಡ ಹೇರುವುದು ಜಾಗತಿಕ ಸ್ಥಿರತೆಗೆ ಅತ್ಯಂತ ಅಪಾಯಕಾರಿ!
ನಮ್ಮ ಸೈನಿಕರ ಮೈ ಮುಟ್ಟಿದರೂ ಯುದ್ಧ ಭುಗಿಲೇಳುವುದು!
‘ಒಂದು ಬಲಿಷ್ಠ ಪಾಕಿಸ್ತಾನ ಅಮೆರಿಕದ ಹಿತಾಸಕ್ತಿಗೆ ಅತ್ಯಂತ ಅಗತ್ಯ!'(ವಂತೆ) – ಅಮೆರಿಕ
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ