|

ಚೆನ್ನೈ (ತಮಿಳುನಾಡು) – ತಮಿಳುನಾಡಿನ ನಾಗಪಟ್ಟಣಂ ಮತ್ತು ಶ್ರೀಲಂಕಾದ ಕಾಂಕೆಸಂತುರೈ ನಡುವೆ ಫೆರಿ (ಬೋಟ್) ಸೇವೆ ಆರಂಭಿಸಲಾಗಿದೆ. ಈ ಸೇವೆಯಡಿ ಪ್ರತಿ ವ್ಯಕ್ತಿಗೆ 7 ಸಾವಿರದ 670 ರೂಪಾಯಿ ದರ ನಿಗದಿಪಡಿಸಲಾಗಿದೆ. 1982ರಲ್ಲಿ ಉತ್ತರ ಶ್ರೀಲಂಕಾದಲ್ಲಿ ಆರಂಭವಾದ ಯಾದವಿ ಯುದ್ಧದಿಂದಾಗಿ ಎರಡೂ ದೇಶಗಳ ನಡುವೆ ಸಮುದ್ರ ಸಂಚಾರ ಸ್ಥಗಿತಗೊಂಡಿತ್ತು. ಈಗ ಈ ಫೆರಿ (ಬೋಟ್) ಸೇವೆಯ ಮೂಲಕ ಪುನರಾರಂಭಿಸಲಾಗಿದೆ.
Ferry services between India and Sri Lanka will enhance connectivity, promote trade and reinforce the longstanding bonds between our nations. https://t.co/VH6O0Bc4sa
— Narendra Modi (@narendramodi) October 14, 2023
ಇದರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅವರು ಭಾರತ-ಶ್ರೀಲಂಕಾ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಈ ದೋಣಿ ಸೇವೆಯು ಮಹತ್ವದ ಹೆಜ್ಜೆಯಾಗಿದೆ. ಭಾರತ ಮತ್ತು ಶ್ರೀಲಂಕಾ ದೇಶಗಳು ಸಂಸ್ಕೃತಿ, ವಾಣಿಜ್ಯ ಮತ್ತು ಸಭ್ಯತೆಯ ಒಂದು ರೀತಿಯ ಸಮಾನ ಇತಿಹಾಸ ಇದೆ. ನಾವು ಭಾರತ ಮತ್ತು ಶ್ರೀಲಂಕಾ ನಡುವಿನ ರಾಜತಾಂತ್ರಿಕ ಮತ್ತು ಆರ್ಥಿಕ ಸಂಬಂಧಗಳಲ್ಲಿ ನಾವು ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇವೆ. ಈ ದೋಣಿ ಸೇವೆಯು ಎಲ್ಲಾ ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಜೀವಂತಗೊಳಿಸುತ್ತದೆಯೆಂದು ಹೇಳಿದರು.
ಈ ಸಮಯದಲ್ಲಿ, ಶ್ರೀಲಂಕಾದ ರಾಷ್ಟ್ರಪತಿ ರಾನಿಲ ವಿಕ್ರಮಸಿಂಘೆ ಅವರು ಮಾತನಾಡಿ, ಎರಡೂ ದೇಶಗಳ ಸಂಚಾರ ಉತ್ತರ ಶ್ರೀಲಂಕಾದಲ್ಲಿ ನಡೆದ ಯಾದವಿ ಯುದ್ಧದಿಂದಾಗಿ ತೊಂದರೆಗೆ ಒಳಗಾಗಿತ್ತು. ಆದರೆ ಈಗ ಈ ಫೆರಿ (ಬೋಟ್) ಸೇವೆಯಿಂದ ಮತ್ತೆ ಉತ್ತೇಜನ ಸಿಗಲಿದೆ ಎಂದು ಹೇಳಿದರು.
ಈಗ ಯುನೈಟೆಡ್ ಕಿಂಗ್ಡಮ್ ಕೂಡ ಮಕ್ಕಳ ಸಾಮಾಜಿಕ ಮಾಧ್ಯಮ ಬಳಕೆಯ ಮೇಲೆ ನಿರ್ಬಂಧ ಹೇರಿದೆ!
ಜನಸಂಖ್ಯೆ ಮತ್ತು ವಲಸೆ ಮೇಲಿನ ನಿರ್ಬಂಧ ವಿಧಿಸುವ ಪ್ರಸ್ತಾಪವನ್ನು ಬಹುಮತದಿಂದ ತಿರಸ್ಕರಿಸಿದ ಸ್ವಿಸ್ ನಾಗರಿಕರು!
ಭಾರತೀಯ ನಾವಿಕರ ಸಾವು: ಭಾರತ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ
Russian Oil Imports : ರಷ್ಯಾದಿಂದ ಇಂಧನ ಖರೀದಿಸುವ ಜಗತ್ತಿನ ಎರಡನೇ ಅತಿ ದೊಡ್ಡ ದೇಶವಾದ ಭಾರತ !
ಶಾಂತಿ ಒಪ್ಪಂದದ ವಿರುದ್ಧ ಬೀದಿಗಿಳಿದ ಇರಾನಿ ನಾಗರಿಕರು!
ಇರಾನ್ ಅಮೆರಿಕಕ್ಕೆ ಸಿಗದಂತೆ ಬಚ್ಚಿಟ್ಟಿದೆ 500 ಕೇಜಿ ಯುರೇನಿಯಂ ದಾಸ್ತಾನು !