ಗ್ರಾಮಪಂಚಾಯತಿಯ ಜಾಗವನ್ನು ಅತಿಕ್ರಮಣ ಮಾಡಿರುವವರಿಂದ ಮೂರ್ತಿಯನ್ನು ಧ್ವಂಸ ಮಾಡಿರುವುದಾಗಿ ಗ್ರಾಮಸ್ಥರ ಆರೋಪ

(ಈ ಮೇಲಿನ ಚಿತ್ರ ಪ್ರಕಟಿಸುವುದರ ಉದ್ದೇಶ ಯಾರ ಧಾರ್ಮಿಕ ಭಾವನೆಗಳಿಗೆ ನೋವನ್ನು ತರುವುದಾಗಿರದೇ ನಿಜ ಸ್ಥಿತಿ ತಿಳಿಸುವುದಾಗಿದೆ)
ಕರ್ನಾಲ (ಹರಿಯಾಣ) – ಇಲ್ಲಿಯ ಶಾಮಗಡ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಶ್ರೀ ಹನುಮಂತನ ಮೂರ್ತಿ ಧ್ವಂಸಗೊಳಿಸಲಾಗಿದೆ. ಈ ಮೂರ್ತಿ ಗ್ರಾಮಪಂಚಾಯತಿಯ ಜಾಗದಲ್ಲಿ ಸ್ಥಾಪಿಸಲಾಗಿತ್ತು. ಮೂರ್ತಿಯನ್ನು ಧ್ವಂಸ ಮಾಡಿದ ನಂತರ ಅದರ ಅವಶೇಷಗಳನ್ನು ಕೆರೆಗೆ ಎಸೆಯಲಾಗಿದೆ. ಈ ಘಟನೆಯ ನಂತರ ಅಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಪೊಲೀಸರಿಗೆ ಈ ಘಟನೆಯ ಮಾಹಿತಿ ದೊರೆಯುತ್ತಲೇ ಅವರು ಎರಡು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿದರು ಹಾಗೂ ಕೆರೆಯಿಂದ ಮೂರ್ತಿಯ ಅವಶೇಷಗಳನ್ನು ಹೊರ ತೆಗೆದರು. ಪೊಲೀಸ ಅಧಿಕಾರಿ ಸೋನು ನರವಾಲ ಇವರು, ಗ್ರಾಮಸ್ಥರು ಇನ್ನೊಂದು ಗುಂಪಿನ ಮೇಲೆ ಮೂರ್ತಿ ಧ್ವಂಸದ ಆರೋಪ ಮಾಡಿದ್ದಾರೆ. ಪೊಲೀಸರು ಎಲ್ಲಾ ದಿಕ್ಕಿನಿಂದ ಈ ಘಟನೆಯ ತನಿಖೆ ನಡೆಸುತ್ತಿದೆ. ಆದಷ್ಟು ಬೇಗನೆ ಅಪರಾಧಿಯನ್ನು ಬಂಧಿಸಲಾಗುವುದು ಎಂದು ಹೇಳಿದರು.
(ಸೌಜನ್ಯ – arnal Breaking News)
ಗ್ರಾಮಸ್ಥರ ಪ್ರಕಾರ, ಗ್ರಾಮಪಂಚಾಯತಿಯ ಯಾವ ಜಾಗದಲ್ಲಿ ಮೂರ್ತಿ ಸ್ಥಾಪನೆ ಮಾಡಲಾಗಿತ್ತು, ಆ ಜಾಗದ ಮೇಲೆ ಇನ್ನೊಂದು ಗುಂಪಿನವರು ಅತಿಕ್ರಮಣ ಮಾಡಿದ್ದರು. ಈ ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಇದೆ. ಮೂರ್ತಿ ಸ್ಥಾಪನೆ ಮಾಡಿರುವುದರಿಂದ ಈ ಗುಂಪಿನವರು ಆಕ್ಷೇಪ ವ್ಯಕ್ತಪಡಿಸಿದ್ದರು. ಅವರು ಮೂರ್ತಿ ತೆರವುಗೊಳಿಸುವುದಕ್ಕಾಗಿ ಬೆದರಿಕೆ ಕೂಡ ನೀಡಿದ್ದರು. ಅವರ ಗುಂಪಿನಿಂದಲೇ ಮೂರ್ತಿ ವಿದ್ವಂಸ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುಹರಿಯಾಣದಲ್ಲಿ ಭಾಜಪದ ಸರಕಾರ ಇರುವಾಗ ಈ ರೀತಿಯ ಘಟನೆ ಘಟಿಸಬಾರದೆಂದು ಹಿಂದುಗಳಿಗೆ ಅನಿಸುತ್ತದೆ ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath