Vijayadashmi : ಅರಿಶಿನ-ಕುಂಕುಮ ಬಳಸದೆ ಆಯುಧಪೂಜೆ ಮಾಡಿ: ರಾಜ್ಯ ಸರಕಾರದಿಂದ ಹೊಸ ಆದೇಶ

ಅರಿಶಿನ-ಕುಂಕುಮ ಕೆಳಗೆ ಬಿದ್ದು ಐತಿಹಾಸಿಕ ಮೆರಗು ಹಾಳಾಗುತ್ತದೆ ಎಂದು ದಾವೆ

ಬೆಂಗಳೂರು : ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡದಲ್ಲಿ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಸರಕಾರ ಆದೇಶ ಹೊರಡಿಸಿದೆ. ಆಯುಧ ಪೂಜೆ ಸಮಯದಲ್ಲಿ ಕಚೇರಿಗಳ ಒಳಗೆ ಮತ್ತು ಕಾರಿಡಾರ್‌ಗಳಲ್ಲಿ ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಬಳಸುವುದರಿಂದ ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡದ ನೆಲಹಾಸುಗಳ ಸೌಂದರ್ಯಕ್ಕೆ ಧಕ್ಕೆಯುಂಟಾಗುತ್ತದೆ. ಈ ಕುರಿತಂತೆ ಹಿಂದೆಯೂ ಅನೇಕ ಸುತ್ತೋಲೆಗಳನ್ನು ಹೊರಡಿಸಿದ್ದಾಗ್ಯೂ ಕೆಲವು ಇಲಾಖೆಯವರು ಈ ಸೂಚನೆಗಳನ್ನು ಪಾಲನೆ ಮಾಡದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸರಕಾರ ಇನ್ನೊಮ್ಮೆ ಈ ಆದೇಶ ಹೊರಡಿಸಿದ್ದಾಗಿ ತಿಳಿಸಿದೆ.