
ಅಲ್ವಾರ್ (ರಾಜಸ್ಥಾನ) – ಉತ್ತರ ಪ್ರದೇಶದಲ್ಲಿ ಕನ್ಹೈ ಲಾಲ್ ಹತ್ಯೆಯಂತಹ ಹತ್ಯಾಕಾಂಡ ನಡೆದಿದ್ದರೆ ಅದರ ಪರಿಣಾಮ ಏನಾಗುತ್ತಿತ್ತು ಎಂಬುದು ನಿಮಗೆ ಚೆನ್ನಾಗಿ ಗೊತ್ತಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಲ್ಲಿ ನಡೆದ ಚುನಾವಣಾ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆಯನ್ನು ಟೀಕಿಸಿದ್ದಾರೆ. ಇಲ್ಲಿನ ತಿಜಾರಾ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಸಂಸದ ಬಾಬಾ ಬಾಲಕನಾಥ್ ಇವರು ಚುನಾವಣಾ ಅರ್ಜಿ ಸಲ್ಲಿಸಿದ್ದಾರೆ. ನಂತರದ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಮಾತನಾಡುತ್ತಿದ್ದರು. ರಾಜಸ್ಥಾನದಲ್ಲಿ ಸಿಂಪಿಗಿತ್ತಿಯಾಗಿದ್ದ ಕನ್ಹಯ್ಯಾಲಾಲ್ ಅವರನ್ನು ಮತಾಂಧರು ಶಿರಚ್ಛೇದ ಮಾಡಿದರು. ಇದನ್ನು ಉಲ್ಲೇಖಿಸಿ ಯೋಗಿ ಆದಿತ್ಯನಾಥ್ ಮೇಲಿನ ಹೇಳಿಕೆ ನೀಡಿದ್ದಾರೆ.ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಮತ್ತು ಗೂಂಡಾಗಿರಿಯನ್ನು ಉತ್ತೇಜಿಸುವ ಸರ್ಕಾರವಾಗಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದರು. ಉತ್ತರ ಪ್ರದೇಶದಲ್ಲಿ ಯಾವುದೇ ದರೋಡೆಕೋರರು ಅಪರಾಧ ಮಾಡಲು ಧೈರ್ಯ ಮಾಡುವುದಿಲ್ಲ.ದರೋಡೆಕೋರರು ಬಡ ವ್ಯಾಪಾರಿಗಳು ಅಥವಾ ಸಾಮಾನ್ಯ ನಾಗರಿಕರ ಭೂಮಿಯ ಮೇಲೆ ಹಿಡಿತ ಸಾಧಿಸಲು ಸಾಧ್ಯವಿಲ್ಲ.ಯಾರಾದರೂ ಹಾಗೆ ಮಾಡಿದಾಗ, ಅವರನ್ನು ಬುಲ್ಡೋಜರ್ ಸರಿ ಮಾಡುತ್ತದೆ. ಹೆಣ್ಣುಮಕ್ಕಳನ್ನು ದುರುಗುಟ್ಟಿ ನೋಡುವ ಧೈರ್ಯ ಯಾರಿಗೂ ಇಲ್ಲ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !