
ಅಯೋಧ್ಯೆ – ಇಲ್ಲಿ ನಡೆಯುವ ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭದ ನೇರ ಪ್ರಸಾರವು ದೇಶದ 5 ಲಕ್ಷ ದೇವಾಲಯಗಳಲ್ಲಿ ಏಕಕಾಲದಲ್ಲಿ ಪ್ರಸಾರವಾಗಲಿದೆ. ಇದರಲ್ಲಿ ಪ್ರತಿಯೊಂದು ದೇವಸ್ಥಾನವೂ ಒಳಗೊಂಡಿರುತ್ತದೆ. ಹಿಂದೂ ಸಮುದಾಯಗಳನ್ನು ಒಟ್ಟಿಗೆ ಸೇರಿಸುವುದು ಮತ್ತು ಶ್ರೀರಾಮ ಮಂದಿರದ ಉದ್ಘಾಟನೆಯ ಮೂಲಕ ಜಾತಿ ಸಿದ್ಧಾಂತವನ್ನು ಕೊನೆಗೊಳಿಸಲು ಪ್ರಯತ್ನಿಸುವುದು ವಿಶ್ವ ಹಿಂದೂ ಪರಿಷತ್ತಿನ ಉದ್ದೇಶವಾಗಿದೆ. ಇದಕ್ಕೂ ಮುನ್ನ ವಿಶ್ವ ಹಿಂದೂ ಪರಿಷತ್ತು ಶ್ರೀ ರಾಮ ಪಾದುಕಾ ಪೂಜೆ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ದೇಶದ ಪ್ರತಿಯೊಂದು ಸಮಾಜ ಮತ್ತು ವಿವಿಧ ಜಾತಿಗಳ ಜನರು ಜೋಡಣೆಯಾಗಿದ್ದರು. ಅಲ್ಲದೆ ಕೆಲ ಸಮಯದ ಹಿಂದೆ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಸಮರ್ಪಣಾ ನಿಧಿ ಅಭಿಯಾನ ಆರಂಭಿಸಲಾಗಿತ್ತು. ಈ ಕಾರ್ಯಕ್ರಮದ ಮೂಲಕ ದೇಶದ ಕೋಟ್ಯಾಂತರ ಹಿಂದೂ ಕುಟುಂಬಗಳು ಒಂದುಗೂಡಿದ್ದವು. ಭಗವಾನ್ ಶ್ರೀ ರಾಮನ ವಿಷಯ ಬಂದಾಗಲೆಲ್ಲ ಇಡೀ ದೇಶವೇ ಜಾತಿ ಭೇದ ಮರೆತು ಒಂದಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್ತಿನ ಡಾ. ಸುರೇಂದ್ರ ಜೈನ್ ಹೇಳಿದರು.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!