Diwali 2023 : ಧನ್ವಂತರಿ ಜಯಂತಿ

ಧನತ್ರಯೋದಶಿಯ ದಿನ (ನವೆಂಬರ್‌ ೧೦) ವ್ಯಾಪಾರಿ ಗಳು ಕೊಪ್ಪರಿಗೆಯನ್ನು ಪೂಜಿಸುತ್ತಾರೆ. ವ್ಯಾಪಾರಿ ವರ್ಷವು ಒಂದು ದೀಪಾವಳಿ ಯಿಂದ ಇನ್ನೊಂದು ದೀಪಾವಳಿ ವರೆಗೆ ಇರುತ್ತದೆ. ಹೊಸ ವರ್ಷದ ಲೆಕ್ಕದ ಖಾತೆಕಿರ್ದಿ ಗಳನ್ನು (ಪುಸ್ತಕಗಳನ್ನು) ಈ ದಿನವೇ ತರುತ್ತಾರೆ. ಆಯುರ್ವೇದದ ದೃಷ್ಟಿ ಯಿಂದ ಆಶ್ವಯುಜ ಕೃಷ್ಣ ಪಕ್ಷ ತ್ರಯೋದಶಿಯು ಧನ್ವಂತರಿ ಜಯಂತಿಯ ದಿನವಾಗಿದೆ. ವೈದ್ಯರು ಈ ದಿನ ಧನ್ವಂತರಿಯ (ಆಯುರ್ವೇದದ ದೇವತೆ) ಪೂಜೆ ಮಾಡುತ್ತಾರೆ. ಬೇವಿನ ಎಲೆಯ ಸಣ್ಣ-ಸಣ್ಣ ತುಂಡು ಮತ್ತು ಸಕ್ಕರೆಯನ್ನು ‘ಪ್ರಸಾದ’ವೆಂದು ಎಲ್ಲರಿಗೂ ಹಂಚುತ್ತಾರೆ. ಇದರಲ್ಲಿ ಬಹುದೊಡ್ಡ ಅರ್ಥವಿದೆ. ಬೇವು ಅಮೃತದಿಂದ ಉತ್ಪನ್ನವಾಗಿದೆ. ಧನ್ವಂತರಿಯು ಅಮೃತ ತತ್ತ್ವ ಕೊಡುವವನಾಗಿದ್ದಾನೆ. ಈ ದಿನ ಬೇವನ್ನು ಧನ್ವಂತರಿಯ ಪ್ರಸಾದವೆಂದು ಕೊಡುತ್ತಾರೆ.