
ತಿಥಿ : ಈ ವಿಧಿಯನ್ನು ಕಾರ್ತಿಕ ಶುಕ್ಲ ದ್ವಾದಶಿಯಿಂದ ಹುಣ್ಣಿಮೆಯ ವರೆಗಿನ ಯಾವುದಾದರೊಂದು ದಿನ ಮಾಡುತ್ತಾರೆ.
ಪೂಜೆ : ತುಳಸಿಯೊಂದಿಗೆ ಶ್ರೀವಿಷ್ಣುವಿನ (ಬಾಲಕೃಷ್ಣನ ಮೂರ್ತಿಯ) ವಿವಾಹವನ್ನು ಮಾಡುವುದೇ ತುಳಸಿ ವಿವಾಹದ ವಿಧಿಯಾಗಿದೆ. ಪ್ರಾಚೀನ ಕಾಲದಲ್ಲಿ ಬಾಲ್ಯ ವಿವಾಹದ ಪದ್ಧತಿಯಿತ್ತು. ವಿವಾಹದ ಹಿಂದಿನ ದಿನ ತುಳಸಿ ಬೃಂದಾವನವನ್ನು ಬಣ್ಣ ಹಚ್ಚಿ ಅಲಂಕರಿಸುತ್ತಾರೆ. ಬೃಂದಾವನದಲ್ಲಿ ಕಬ್ಬು, ಚೆಂಡು ಹೂವುಗಳನ್ನು ಹಾಕುತ್ತಾರೆ ಮತ್ತು ಅದರ ಬುಡದಲ್ಲಿ ಹುಣಸೇ ಕಾಯಿ ಮತ್ತು ನೆಲ್ಲಿಕಾಯಿಗಳನ್ನು ಇಡುತ್ತಾರೆ. ಈ ವಿವಾಹದ ವಿಧಿಯನ್ನು ಸಾಯಂಕಾಲ ಮಾಡುತ್ತಾರೆ.
ಇ. ವೈಶಿಷ್ಟ್ಯ : ತುಳಸಿ ವಿವಾಹದ ಬಳಿಕ ಚಾತುರ್ಮಾಸದಲ್ಲಿ ಕೈಗೊಂಡ ಎಲ್ಲ ವ್ರತಗಳನ್ನು ಸಮಾಪ್ತಗೊಳಿಸುತ್ತಾರೆ. ಚಾತುರ್ಮಾಸದಲ್ಲಿ ವರ್ಜ್ಯ ಮಾಡಿದ ಪದಾರ್ಥಗಳನ್ನು ಬ್ರಾಹ್ಮಣರಿಗೆ ದಾನ ಮಾಡಿ ನಂತರ ತಾವೂ ಸೇವಿಸುತ್ತಾರೆ.
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !
ರಾಜ್ಯದಲ್ಲಿನ ಪ್ರಾರ್ಥನಾ ಸ್ಥಳಗಳ ಮೇಲಿನ ಧ್ವನಿವರ್ಧಕಗಳ ಶಬ್ದವನ್ನು ಸೀಮಿತವಾಗಿಡಿ !
ಆಭರಣಗಳನ್ನು ಉಪಯೋಗಿಸುವ ಮಹತ್ವ
ಅಕ್ಷಯ ತದಿಗೆಯ ದಿನ ಪುಣ್ಯವನ್ನು ಹೇಗೆ ಪಡೆಯುವಿರಿ ?