ನವದೆಹಲಿ – ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು ದೇಶಾದ್ಯಂತ 8 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ 55 ಸ್ಥಳಗಳಲ್ಲಿ ದಾಳಿ ನಡೆಸಿ 47 ಜನರನ್ನು ಬಂಧಿಸಿದೆ. ರೋಹಿಂಗ್ಯಾ ಮುಸಲ್ಮಾನರಿಗೆ ಭಾರತದಲ್ಲಿ ನುಸುಳಲು ಮತ್ತು ಅವರನ್ನು ದೇಶದಲ್ಲಿ ನೆಲೆಸಲಿಕ್ಕಾಗಿ ವ್ಯವಸ್ಥೆ ಮಾಡುವ ಜನರನ್ನು ಬಂಧಿಸಲಾಗಿದೆ. ಈ ಪೈಕಿ ತ್ರಿಪುರಾದಿಂದ 21, ಕರ್ನಾಟಕದಿಂದ 10, ಅಸ್ಸಾಂನಿಂದ 5, ಬಂಗಾಳದಿಂದ 3, ತಮಿಳುನಾಡಿನಿಂದ 2 ಮತ್ತು ಹರಿಯಾಣ, ತೆಲಂಗಾಣ ಮತ್ತು ಪುದುಚೇರಿಯಿಂದ ತಲಾ ಒಬ್ಬರನ್ನು ಬಂಧಿಸಲಾಗಿದೆ. ಇದಲ್ಲದೆ, ರಾಜಸ್ಥಾನ ಮತ್ತು ಜಮ್ಮು- ಕಾಶ್ಮೀರದಿಂದ ಕೆಲವರನ್ನು ಬಂಧಿಸಲಾಗಿದೆ. ಈ ವರ್ಷದ ಫೆಬ್ರವರಿಯಲ್ಲಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವರನ್ನು ಅಸ್ಸಾಂ ಪೊಲೀಸರು ವಿಚಾರಣೆಗೊಳಪಡಿಸಿದಾಗ ಅವರು ಬಾಂಗ್ಲಾದೇಶಿ ನುಸುಳುಕೋರರು ಎಂದು ತಿಳಿದುಬಂದಿದೆ. ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ವತಃ ಈ ವಿಚಾರಣೆಯ ಮೇಲೆ ಗಮನವಿಟ್ಟಿದ್ದಾರೆ.
1. ರಾಷ್ಟ್ರೀಯ ತನಿಖಾ ಸಂಸ್ಥೆ ನಡೆಸಿದ ದಾಳಿಯಲ್ಲಿ ನಕಲಿ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಲ್ಲದೇ 20 ಲಕ್ಷ ರೂಪಾಯಿ ಹಾಗೂ 4 ಸಾವಿರದ 550 ಅಮೆರಿಕನ್ ಡಾಲರ್ (ಅಂದಾಜು 3 ಲಕ್ಷ 78 ಸಾವಿರ ರೂಪಾಯಿ) ವಶಪಡಿಸಿಕೊಂಡಿದ್ದಾರೆ.
2. ಗಡಿ ಭದ್ರತಾ ಪಡೆಯ ಸಹಾಯದಿಂದ ಬಾಂಗ್ಲಾದೇಶದಿಂದ 450 ನುಸುಳುಕೋರರು ಮತ್ತು ರೋಹಿಂಗ್ಯಾಗಳನ್ನು ದೇಶದ ಒಳಗೆ ಪ್ರವೇಶಿಸದಂತೆ ತಡೆದು ವಾಪಸ್ ಕಳುಹಿಸಲಾಗಿದೆ ಎಂದು ಅಸ್ಸಾಂ ವಿಶೇಷ ಪೊಲೀಸ್ ಮಹಾನಿರ್ದೇಶಕ ಹರ್ಮೀತ್ ಸಿಂಗ್ ಹೇಳಿದ್ದಾರೆ.
ಸಂಪಾದಕೀಯ ನಿಲುವುಇಂತಹ ದೇಶದ್ರೋಹಿಗಳಿಗೆ ಮರಣದಂಡನೆ ವಿಧಿಸಲು ಸರಕಾರ ಕಾನೂನು ರಚಿಸಬೇಕು! |

ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!