ನವದೆಹಲಿ – ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು ದೇಶಾದ್ಯಂತ 8 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ 55 ಸ್ಥಳಗಳಲ್ಲಿ ದಾಳಿ ನಡೆಸಿ 47 ಜನರನ್ನು ಬಂಧಿಸಿದೆ. ರೋಹಿಂಗ್ಯಾ ಮುಸಲ್ಮಾನರಿಗೆ ಭಾರತದಲ್ಲಿ ನುಸುಳಲು ಮತ್ತು ಅವರನ್ನು ದೇಶದಲ್ಲಿ ನೆಲೆಸಲಿಕ್ಕಾಗಿ ವ್ಯವಸ್ಥೆ ಮಾಡುವ ಜನರನ್ನು ಬಂಧಿಸಲಾಗಿದೆ. ಈ ಪೈಕಿ ತ್ರಿಪುರಾದಿಂದ 21, ಕರ್ನಾಟಕದಿಂದ 10, ಅಸ್ಸಾಂನಿಂದ 5, ಬಂಗಾಳದಿಂದ 3, ತಮಿಳುನಾಡಿನಿಂದ 2 ಮತ್ತು ಹರಿಯಾಣ, ತೆಲಂಗಾಣ ಮತ್ತು ಪುದುಚೇರಿಯಿಂದ ತಲಾ ಒಬ್ಬರನ್ನು ಬಂಧಿಸಲಾಗಿದೆ. ಇದಲ್ಲದೆ, ರಾಜಸ್ಥಾನ ಮತ್ತು ಜಮ್ಮು- ಕಾಶ್ಮೀರದಿಂದ ಕೆಲವರನ್ನು ಬಂಧಿಸಲಾಗಿದೆ. ಈ ವರ್ಷದ ಫೆಬ್ರವರಿಯಲ್ಲಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವರನ್ನು ಅಸ್ಸಾಂ ಪೊಲೀಸರು ವಿಚಾರಣೆಗೊಳಪಡಿಸಿದಾಗ ಅವರು ಬಾಂಗ್ಲಾದೇಶಿ ನುಸುಳುಕೋರರು ಎಂದು ತಿಳಿದುಬಂದಿದೆ. ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ವತಃ ಈ ವಿಚಾರಣೆಯ ಮೇಲೆ ಗಮನವಿಟ್ಟಿದ್ದಾರೆ.
1. ರಾಷ್ಟ್ರೀಯ ತನಿಖಾ ಸಂಸ್ಥೆ ನಡೆಸಿದ ದಾಳಿಯಲ್ಲಿ ನಕಲಿ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಲ್ಲದೇ 20 ಲಕ್ಷ ರೂಪಾಯಿ ಹಾಗೂ 4 ಸಾವಿರದ 550 ಅಮೆರಿಕನ್ ಡಾಲರ್ (ಅಂದಾಜು 3 ಲಕ್ಷ 78 ಸಾವಿರ ರೂಪಾಯಿ) ವಶಪಡಿಸಿಕೊಂಡಿದ್ದಾರೆ.
2. ಗಡಿ ಭದ್ರತಾ ಪಡೆಯ ಸಹಾಯದಿಂದ ಬಾಂಗ್ಲಾದೇಶದಿಂದ 450 ನುಸುಳುಕೋರರು ಮತ್ತು ರೋಹಿಂಗ್ಯಾಗಳನ್ನು ದೇಶದ ಒಳಗೆ ಪ್ರವೇಶಿಸದಂತೆ ತಡೆದು ವಾಪಸ್ ಕಳುಹಿಸಲಾಗಿದೆ ಎಂದು ಅಸ್ಸಾಂ ವಿಶೇಷ ಪೊಲೀಸ್ ಮಹಾನಿರ್ದೇಶಕ ಹರ್ಮೀತ್ ಸಿಂಗ್ ಹೇಳಿದ್ದಾರೆ.
ಸಂಪಾದಕೀಯ ನಿಲುವುಇಂತಹ ದೇಶದ್ರೋಹಿಗಳಿಗೆ ಮರಣದಂಡನೆ ವಿಧಿಸಲು ಸರಕಾರ ಕಾನೂನು ರಚಿಸಬೇಕು! |

ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”