
ಅಯೋಧ್ಯೆ (ಉತ್ತರಪ್ರದೇಶ) – ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿಯಂದು ಇಲ್ಲಿನ ಸರಯೂ ನದಿಯ ೫೧ ಘಾಟಗಳಲ್ಲಿ ದೀಪಗಳನ್ನು ಬೆಳಗಿಸಲಾಗುವುದು. ಈ ವರ್ಷ ೨೪ ಲಕ್ಷ ದೀಪಗಳನ್ನು ಬೆಳಗಿಸಲಾಗುವುದು. ಇದು ಒಂದು ವಿಶ್ವದಾಖಲೆ ಆಗಬಹುದು ಎಂದು ಹೇಳಲಾಗುತ್ತಿದೆ. ಇದೇ ವೇಳೆ ‘ಲೇಸರ್ ಶೋ‘ ಮಾಧ್ಯಮದ ಮೂಲಕ ಭಗವಾನ ಶ್ರೀ ರಾಮನ ಚರಿತ್ರೆಯನ್ನು ತೋರಿಸಲಾಗುವುದು. ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದು ಏಳನೇ ದೀಪೋತ್ಸವವಾಗಿದೆ.
ಈ ದೀಪೋತ್ಸವದಲ್ಲಿ ೨೫ ಸಾವಿರಕ್ಕೂ ಅಧಿಕ ಸ್ವಯಂಸೇವಕರು ಭಾಗವಹಿಸುವರು. ದೀಪೋತ್ಸವದಲ್ಲಿ ವಿದೇಶಿ ಕಲಾವಿದರು ರಾಮಲೀಲಾ ಕಾರ್ಯಕ್ರಮದಲ್ಲಿ ಸಹಭಾಗಿಯಾಗುವರು. ಇದರಲ್ಲಿ ರಷ್ಯಾ, ಶ್ರೀಲಂಕಾ, ಸಿಂಗಾಪುರ ಮತ್ತು ನೇಪಾಳದ ಕಲಾವಿದರು ಭಾಗವಹಿಸಲಿದ್ದಾರೆ. ದೇಶದಲ್ಲಿಯ ೨೧ ರಾಜ್ಯಗಳ ಜನರು ರಾಮಾಯಣ ಮತ್ತು ರಾಮಲೀಲಾ ಸಂಪ್ರದಾಯಗಳನ್ನು ಆಧರಿಸಿ ಪ್ರದರ್ಶನ ಮಾಡಲಿದ್ದಾರೆ. ಇದಕ್ಕಾಗಿ ಎರಡೂವರೆ ಸಾವಿರ ಕಲಾವಿದರು ಅಯೋಧ್ಯೆ ತಲುಪಿದ್ದಾರೆ ಎಂದು ಅಂದಾಜಿಸಲಾಗಿದೆ.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!