
ಜಿನೀವಾ – ಧಾರ್ಮಿಕ ಮತ್ತು ಜನಾಂಗೀಯ ಅಲ್ಪಸಂಖ್ಯಾತರ ಪೂಜಾ ಸ್ಥಳಗಳ ಮೇಲಿನ ದಾಳಿಯನ್ನು ನಿಲ್ಲಿಸಿರಿ, ಎಂಬ ಪದಗಳಲ್ಲಿ ಭಾರತ ಕೆನಡಾದ ಕಿವಿ ಹಿಂಡಿದೆ. ಭಾರತದ ಸ್ಥಾಯಿ ಸಮಿತಿಯ ಕಾರ್ಯದರ್ಶಿ ಕೆ.ಎಸ್. ಮೊಹಮ್ಮದ್ ಹುಸೇನ್ ಇವರು ಕಳೆದ ವಾರ ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಪರಿಷತ್ತಿನ ಸಭೆಯಲ್ಲಿ ಕೆನಡಾದ ಕಿವಿ ಹಿಂಡಿದರು. ಹುಸೇನ ತಮ್ಮ ಭಾಷಣದಲ್ಲಿ, `ಮಾನವ ಕಳ್ಳಸಾಗಣೆಯನ್ನು ತಡೆಗಟ್ಟಲು ಕೆನಡಾದ ನಿಯೋಗವು ರಾಷ್ಟ್ರೀಯ ವರದಿಯನ್ನು ಸಲ್ಲಿಸಿರುವ ಬಗ್ಗೆ ಭಾರತ ಸ್ವಾಗತಿಸುತ್ತದೆ ಮತ್ತು ಅವರಿಗೆ ಧನ್ಯವಾದ ಅರ್ಪಿಸುತ್ತದೆಯೆಂದು ಹೇಳಿದರು.
ಭಾರತವು ಕೆನಡಾಗೆ,
1. ಹಿಂಸಾಚಾರವನ್ನು ಪ್ರಚೋದಿಸಲು ಕಾರಣವಾಗಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗವನ್ನು ತಡೆಯಿರಿ. ಅದಕ್ಕಾಗಿ ದೇಶೀಯ ಚೌಕಟ್ಟನ್ನು ಬಲಪಡಿಸಿ, ಭಯೋತ್ಪಾದಕತೆಗೆ ಉತ್ತೇಜಿಸುವ ಗುಂಪುಗಳ ಚಟುವಟಿಕೆಗಳನ್ನು ಬೆಂಬಲಿಸಬೇಡಿರಿ.
2. ಧಾರ್ಮಿಕ ಮತ್ತು ಜನಾಂಗೀಯ ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳನ್ನು ಮತ್ತು ದ್ವೇಷದ ಭಾಷಣವನ್ನು ತಡೆಗಟ್ಟಲು ಕಠಿಣ ಕ್ರಮಗಳನ್ನು ಕೈಗೊಳ್ಳಿರಿ ಎಂದು ಹೇಳಿದ್ದಾರೆ.
Teesta River Project : ಭಾರತವನ್ನು ಬದಿಗೊತ್ತಿ ಚೀನಾಕ್ಕೆ ೯ ಸಾವಿರ ಕೋಟಿ ರೂಪಾಯಿಗಳ ತೀಸ್ತಾ ನದಿ ಯೋಜನೆ ಒಪ್ಪಿಸಿದ ಬಾಂಗ್ಲಾದೇಶ !
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು