|

ನವ ದೆಹಲಿ – ರಾಜಸ್ಥಾನ, ಮಿಜೋರಾಮ, ಮಧ್ಯ ಪ್ರದೇಶ, ಛತ್ತಿಸ್ಗಢ ಮತ್ತು ತೆಲಂಗಾಣ ಈ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯೋಗವು ಮಾಹಿತಿ ನೀಡುವಾಗ, ಚುನಾವಣೆಯ ಸಮಯದಲ್ಲಿ ಇಲ್ಲಿಯವರೆಗೆ ಈ ಐದು ರಾಜ್ಯಗಳಿಂದ ೧ ಸಾವಿರದ ೭೬೦ ಕೋಟಿ ರೂಪಾಯಿಯ ಸಾರಾಯಿ, ಮಾದಕ ವಸ್ತುಗಳು, ನಗದು ಮತ್ತು ಬೆಲೆ ಬಾಳುವ ಧಾತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಖ್ಯೆ ಈ ರಾಜ್ಯಗಳಲ್ಲಿನ ೨೦೧೮ ರ ವಿಧಾನಸಭೆಯ ಚುನಾವಣೆಯಲ್ಲಿ ವಶಪಡಿಸಿಕೊಳ್ಳಲಾಗಿರುವ ಹಣಕ್ಕಿಂತಲೂ ೭ ಪಟ್ಟು ಹೆಚ್ಚಾಗಿದೆ. ಕಳೆದ ಸಾರಿ ೨೩೯ ಕೋಟಿ ೧೫ ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿತ್ತು. ಈಗ ವಶಪಡಿಸಿಕೊಳ್ಳಲಾಗಿರುವ ವಸ್ತುಗಳು ಮತ್ತು ಹಣ ಮತದಾರರನ್ನು ಆಕರ್ಷಿಸಲು ಹಂಚಲಾಗುತ್ತಿತ್ತು. ಚುನಾವಣಾ ಆಯೋಗದಿಂದ ಚುನಾವಣೆಯ ಘೋಷಣೆ ಮಾಡಿದನಂತರ ಎಂದರೆ ಅಕ್ಟೋಬರ್ ೯ ರಿಂದ ಈ ವಸ್ತುಗಳನ್ನು ವಶಪಡಿಸಿಕೊಳ್ಳುವುದು ಆರಂಭವಾಗಿತ್ತು. ಎಂದು ಹೇಳಿದೆ.
ಚುನಾವಣಾ ಆಯೋಗದ ಹೇಳಿಕೆಯ ಪ್ರಕಾರ, ಈ ಹಿಂದೆ ನಡೆದಿರುವ ೬ ರಾಜ್ಯಗಳ ಚುನಾವಣೆಯಲ್ಲಿ (ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ಮೇಘಾಲಯ, ತ್ರಿಪುರ, ಗುಜರಾತ ಮತ್ತು ಕರ್ನಾಟಕ) ೧ ಸಾವಿರದ ೪೦೦ ಕೋಟಿ ರೂಪಾಯ ವಸ್ತುಗಳು ವಶಪಡಿಸಿಕೊಳ್ಳಲಾಗಿದೆ. ಈ ರಾಜ್ಯಗಳಲ್ಲಿ ಕಳೆದ ಚುನಾವಣೆಯಲ್ಲಿ ವಶಪಡಿಸಿಕೊಳ್ಳಲಾಗಿರುವ ಹಣದಲ್ಲಿ ೧೧ ಪಟ್ಟು ಹೆಚ್ಚಳವಾಗಿದೆ.
| ಸಂಪಾದಕೀಯ ನಿಲುವು
ಮತದಾರರಿಗೆ ಸಾರಾಯಿ, ಹಣ ಮುಂತಾದವು ಹಂಚಲಾಗುತ್ತದೆ, ಇದು ಪ್ರತಿಯೊಬ್ಬರಿಗೂ ತಿಳಿದಿದೆ. ಇದರಲ್ಲಿ ಹೊಸದೆನಿಲ್ಲ. ಜಗತ್ತಿನ ಎಲ್ಲಕ್ಕಿಂತ ದೊಡ್ಡ ಪ್ರಜಾಪ್ರಭುತ್ವ ಇರುವ ಭಾರತದಲ್ಲಿ ಹೀಗೆ ವರ್ಷಗಳಿಂದ ನಡೆಯುತ್ತಿದೆ, ಇದು ಭಾರತೀಯರಿಗೆ ಲಜ್ಜಾಸ್ಪದ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !