ಸಮೀಕ್ಷೆಯ ವರದಿಯನ್ನು ಸಲ್ಲಿಸಲು 3 ವಾರಗಳ ಕಾಲಾವಕಾಶ ಕೋರಿಕೆ

ಜ್ಞಾನವಾಪಿ ಪ್ರಕರಣ !

ವಾರಣಾಸಿ – ಜ್ಞಾನವಾಪಿ ಪ್ರಕರಣದಲ್ಲಿ ಭಾರತೀಯ ಪುರಾತತ್ವ ಇಲಾಖೆ (ಎ.ಎಸ್‌.ಐ.) ವರದಿಯನ್ನು ನವೆಂಬರ್ 28 ರಂದು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಬೇಕಿತ್ತು; ಆದರೆ ಮತ್ತೊಮ್ಮೆ ಪುರಾತತ್ವ ಇಲಾಖೆ ಸಮೀಕ್ಷಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು 3 ವಾರಗಳ ಕಾಲಾವಕಾಶ ಕೇಳಿದೆ.

ಜ್ಞಾನವಾಪಿ ಸಮೀಕ್ಷಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಗಡುವನ್ನು ಹಲವು ಬಾರಿ ವಿಸ್ತರಿಸಲಾಗಿದೆ. ನ್ಯಾಯಾಲಯದ ಆದೇಶದಂತೆ 100 ದಿನಗಳ ಜ್ಞಾನವಾಪಿ ಸಮೀಕ್ಷೆ ನಡೆಸಲಾಗಿದೆ. ಈ ಸಮೀಕ್ಷೆಯನ್ನು ಆಧರಿಸಿ ವಿಡಿಯೋ ಕೂಡ ಮಾಡಲಾಗಿದೆ. ಸಮೀಕ್ಷಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ನಂತರ ಜ್ಞಾನವಾಪಿ ಕಾಂಪ್ಲೆಕ್ಸ್‌ನಲ್ಲಿ ಏನಿದೆ ?’ ಎಂಬುದು ಗೊತ್ತಾಗಲಿದೆ.