
ಅಗರ್ತಲಾ (ತ್ರಿಪುರ) – ತ್ರಿಪುರಾದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಈ ವರ್ಷ ಒಟ್ಟು 716 ನುಸುಳುಕೋರರನ್ನು ಬಂಧಿಸಲಾಗಿದೆ ಎಂದು ಗಡಿ ಭದ್ರತಾ ಪಡೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರಲ್ಲಿ 112 ರೋಹಿಂಗ್ಯಾ ಮುಸ್ಲಿಮರು ಮತ್ತು 319 ಬಾಂಗ್ಲಾದೇಶಿ ನುಸುಳುಕೋರರು ಸೇರಿದ್ದಾರೆ. ಗಡಿ ಭದ್ರತಾ ಪಡೆ ಇತ್ತೀಚೆಗೆ ತನ್ನ 59 ನೇ ಸಂಸ್ಥಾಪನಾ ದಿನವನ್ನು ಆಚರಿಸಿತು. ಈ ಸಂದರ್ಭದಲ್ಲಿ ತ್ರಿಪುರಾದ ಪ್ರಧಾನ ಕಛೇರಿಯಲ್ಲಿ ಗಡಿ ಭದ್ರತಾ ಪಡೆಯ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ ಆರ್.ಕೆ. ಸಿಂಗ್ ಇವರು, ‘ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆ ಕಾವಲು ಕಾಯುತ್ತಿದೆ. ಪರಿಣಾಮವಾಗಿ, ಅವರು 2023 ರಲ್ಲಿ ನುಸುಳುತ್ತಿದ್ದ 112 ರೋಹಿಂಗ್ಯಾ ಮುಸ್ಲಿಮರು, 319 ಬಾಂಗ್ಲಾದೇಶಿ ನುಸುಳುಕೋರರು ಮತ್ತು 285 ಭಾರತೀಯರನ್ನು ಹಿಡಿದಿದ್ದಾರೆ. ಈ ವರ್ಷವೂ ಗಡಿ ಭದ್ರತಾ ಪಡೆ 23 ಕೋಟಿ 12 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ. ಭಾರತದ ಈಶಾನ್ಯ ರಾಜ್ಯ ಬಾಂಗ್ಲಾದೇಶದಿಂದ 856 ಕಿ.ಮೀ. ಉದ್ದದ ಗಡಿ ಮಿತಿ ಹೊಂದಿದೆ ಎಂದು ಹೇಳಿದರು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”