ಗೊಂಬೆ ಮತ್ತು ಲಿಂಬೆ ಪತ್ತೆ !

ಧಾರವಾಡ – ಇಲ್ಲಿಯ ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ರಮಾ ಗುಂಡೂರಾವ ಅವರ ಕೊಠಡಿಯಲ್ಲಿ ಯಾರೋ ಕಪ್ಪು ಗೊಂಬೆ, 3 ನಿಂಬೆ, ಅರಿಶಿನ ಮತ್ತು ಕುಂಕುಮ ಎಸೆದಿರುವುದು ಕಂಡು ಬಂದಿದೆ. ಪ್ರಾಧ್ಯಾಪಕಿ ಡಾ. ರಮಾ ಗುಂಡೂರಾವ ಅವರು ಕೆಲವು ದಿನಗಳ ಕಾಲ ರಜೆಯ ಮೇಲೆ ತೆರಳಿದ್ದರು. ಆ ಸಮಯದಲ್ಲಿ ಅವರ ಕೊಠಡಿ ಮುಚ್ಚಲಾಗಿತ್ತು. ಅವರು ಮರಳಿ ಬಂದ ಬಳಿಕ ಕೊಠಡಿಯನ್ನು ತೆರೆದಾಗ ಈ ವಸ್ತುಗಳು ಕಂಡು ಬಂದಿತು. ಕೊಠಡಿಯ ಕೀ ಅವರ ಬಳಿ ಇದ್ದ ಕಾರಣ ಕಿಟಕಿಯಿಂದ ವಸ್ತುಗಳನ್ನು ಎಸೆಯಲಾಗಿದೆಂದು ಹೇಳಲಾಗುತ್ತಿದೆ. ಈ ಘಟನೆಯ ಹಿಂದೆ ವೈಯಕ್ತಿಕ ಜಗಳವಿದೆಯೆಂದು ಹೇಳಲಾಗುತ್ತಿದೆ. ಪ್ರಾಧ್ಯಾಪಕಿ ರಮಾ ಗುಂಡೂರಾವ ಅವರ ಅಳಿಯ ಅದೇ ಇಲಾಖೆಯಲ್ಲಿ ಕೆಲಸ ಮಾಡುತ್ತಾರೆ. ಈ ಕೊಠಡಿಯ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದ್ದು, ಈ ಕಾರಣದಿಂದಲೇ ಈ ಘಟನೆ ನಡೆದಿದೆಯೆಂದು ಅಲ್ಲಿನ ನೌಕರರು ಸಂಶಯವನ್ನು ವ್ಯಕ್ತಪಡಿಸುತ್ತಿದ್ದಾರೆ.
ಸಂಪಾದಕೀಯ ನಿಲುವುವಿಶ್ವವಿದ್ಯಾಲಯಗಳು ಅಥವಾ ಶಿಕ್ಷಣ ಸಂಸ್ಥೆಗಳು ತಮ್ಮನ್ನು ‘ಪ್ರಗತಿಪರ’ ಅಥವಾ ‘ಆಧುನಿಕ ಚಿಂತನೆಯ ಮೂಲ’ ಎಂದು ತಿಳಿಯುತ್ತವೆ. ಆದರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿಯೊಬ್ಬರ ಕೊಠಡಿಯಲ್ಲಿ ಇಂತಹ ಘಟನೆ ನಡೆದಿರುವುದು ಪ್ರಗತಿ(ಅಧೋ)ಪರರರಿಗೆ ನಾಚಿಕೆಗೇಡು ಎಂದೇ ಹೇಳಬೇಕು ! |
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು