|

ಚೆನ್ನೈ (ತಮಿಳುನಾಡು) – ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರಚನೆಯಿಂದಾಗಿ ‘ಮೈಚಾಂಗ್’ ಚಂಡಮಾರುತ (ಶಕ್ತಿ ಅಥವಾ ಸ್ಥಿತಿಸ್ಥಾಪಕತ್ವ) ಹೆಸರಿನ ಚೆಂಡಮಾರುತ ರೂಪುಗೊಂಡಿದೆ. ಈ ಚಂಡಮಾರುತದಿಂದ ಚೆನ್ನೈ ನಗರದಲ್ಲಿ ಧಾರಾಕಾರ ಮಳೆಯಾಗಿದೆ. ಇಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಚೆನ್ನೈ ನಗರದ ಪಕ್ಕದಲ್ಲಿರುವ ಚೆಂಗಲ್ಪೇಟ, ಕಾಂಚೀಪುರಂ ಮತ್ತು ತಿರುವಳ್ಳೂರು ಜಿಲ್ಲೆಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅಲ್ಲದೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರವಾಹದಿಂದಾಗಿ ವಿಮಾನ ಸಂಚಾರ ಸ್ಥಗಿತಗೊಂಡಿದೆ. ನಗರದಲ್ಲಿ ಗಂಟೆಗೆ 35 ರಿಂದ 80 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ನಾಗರಿಕರು ಮನೆಯಿಂದ ಹೊರಗೆ ಬರದಂತೆ ಮಹಾನಗರ ಪಾಲಿಕೆ ಸಲಹೆ ನೀಡಿದೆ. ಚಂಡಮಾರುತದ ಸಾಧ್ಯತೆಯಿಂದಾಗಿ ಇಲ್ಲಿನ ಶಾಲೆಗಳನ್ನು ಈಗಾಗಲೇ ಮುಚ್ಚಲಾಗಿದೆ.
#WATCH | Tamil Nadu: Amid heavy rainfall, severe water logging witnessed in Chennai city. pic.twitter.com/eyXfFjpuHf
— ANI (@ANI) December 4, 2023
ಮೈಚಾಂಗ್ ಚಂಡಮಾರುತವು ನಾಳೆ ಅಂದರೆ ಡಿಸೆಂಬರ್ 5 ರಂದು ಆಂಧ್ರಪ್ರದೇಶ ರಾಜ್ಯವನ್ನು ಅಪ್ಪಳಿಸಲಿದೆ. ರಾಜ್ಯದ ನೆಲ್ಲೂರು ಮತ್ತು ಮಚಲಿಪಟ್ಟಣಂ ಜಿಲ್ಲೆಗಳಲ್ಲಿ ಮಳೆ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ 21 ಘಟಕಗಳನ್ನು ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ನಿಯೋಜಿಸಲಾಗಿದೆ. ಚಂಡಮಾರುತದ ಕಾರಣ, ಡಿಸೆಂಬರ್ 3 ಮತ್ತು 7 ರ ನಡುವೆ ಚಲಿಸುವ 144 ರೈಲುಗಳನ್ನು ಕೇಂದ್ರ ರೈಲ್ವೆ ಇಲಾಖೆ ರದ್ದುಗೊಳಿಸಿದೆ.
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein