ನಾನು ಹಿಂದೂ ರಾಷ್ಟ್ರಕ್ಕಾಗಿ ಹೋರಾಡುತ್ತಿರುವೆ ! – ಟಿ. ರಾಜಾ ಸಿಂಗ್, ಹಿಂದುತ್ವನಿಷ್ಠ ಶಾಸಕ

ಭಾಗ್ಯನಗರ (ತೆಲಂಗಾಣ) – ಇಲ್ಲಿಯ ಗೋಶಾಮಹಲ್ ಚಿನಾವಣಾ ಕ್ಷೇತ್ರದಿಂದ ಮೂರನೇ ಬಾರಿ ಜಯಭೇರಿ ಸಾಧಿಸಿದ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಅವರು ಡಿಸೆಂಬರ್ 4, 2023 ರಂದು ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಅವರು ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಮತ್ತು ದೇಶದ ವಿವಿಧ ಭಾಗಗಳಲ್ಲಿ ತಮ್ಮ ಬೆಂಬಲಿಗರಿಗೆ ಧನ್ಯವಾದ ಹೇಳಿದ್ದಾರೆ. ಅವರು, ”ನಾನು ಈ ವಿಜಯವನ್ನು ಇಡೀ ಭಾರತದ ಹಿಂದೂ ಸಮುದಾಯಕ್ಕೆ ನೀಡುತ್ತೇನೆ. ನಾನು ಹಿಂದೂ ಆಗಿದ್ದರಿಂದ ಹಿಂದುತ್ವದ ಬಗ್ಗೆ ಮಾತನಾಡುವುದನ್ನು ಮುಂದುವರಿಸುತ್ತೇನೆ. ನಾನು ಹಿಂದೂ ರಾಷ್ಟ್ರಕ್ಕಾಗಿ ಹೋರಾಟ ಮುಂದುವರಿಸುತ್ತೇನೆ ಎಂದು ಹೇಳಿದರು.