ಪ್ರಯಾಣಿಕರಿಂದ ರೇಲ್ವೆ ಇಲಾಖೆಯ ಮೆಚ್ಚುಗೆ

ನವದೆಹಲಿ – ಕೋಲಕಾತಾದಿಂದ ಹೊರಡುವ ಶತಾಬ್ದಿ ಎಕ್ಸ್ಪ್ರೆಸ್ನ ಬೋಗಿಗಳಲ್ಲಿ ಕಿಟಕಿಗಳ ಬದಿಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಛಾಯಾಚಿತ್ರಗಳನ್ನು ಹಚ್ಚಲಾಗಿದೆ. ಛಾಯಾಚಿತ್ರಗಳ ಪಕ್ಕದಲ್ಲಿ ಆಯಾ ಸ್ವಾತಂತ್ರ್ಯ ಹೋರಾಟಗಾರರ ವಿಷಯದಲ್ಲಿ ಮಾಹಿತಿಯನ್ನು ನೀಡಲಾಗಿದೆ. ಇದರಿಂದ ಪ್ರಯಾಣಿಕರಿಗೆ ಸಹಜವಾಗಿ ಸ್ವಾತಂತ್ರ್ಯ ಹೋರಾಟಗಾರರ ವಿಷಯದಲ್ಲಿ ಮಾಹಿತಿ ಸಿಗುತ್ತಿದೆ. ಈ ಬೋಗಿಗಳಲ್ಲಿ ಸ್ವಾತಂತ್ರ್ಯವೀರ ಸಾವರಕರ, ಯೋಗಿ ಅರವಿಂದ, ಖುದೀರಾಮ ಬೋಸ, ಮೇಡಂ ಕಾಮಾ, ಸರದಾರ ಪಟೇಲ, ನೇತಾಜಿ ಸುಭಾಷಚಂದ್ರ ಬೋಸ ಮುಂತಾದವರ ಛಾಯಾಚಿತ್ರಗಳು ಪ್ರಯಾಣಿಕರ ಗಮನ ಸೆಳೆಯುತ್ತಿವೆ. ಕೇಂದ್ರ ಸರಕಾರದ ಈ ಉಪಕ್ರಮದಿಂದಾಗಿ ಪ್ರಯಾಣಿಕರೊಂದಿಗೆ ಇರುವ ಚಿಕ್ಕ ಮಕ್ಕಳ ಜ್ಞಾನವೂ ವೃದ್ಧಿಸುತ್ತಿದೆ. ಸ್ವಾತಂತ್ರ್ಯದ ಅಮೃತಮಹೋತ್ಸವದ ನಿಮಿತ್ತದಿಂದ ಪ್ರಾರಂಭಿಸಲಾಗಿರುವ ಈ ಉಪಕ್ರಮದ ಬಗ್ಗೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಸಂಪಾದಕರ ನಿಲುವು* ಸರಕಾರವು ಶತಾಬ್ದಿ ಎಕ್ಸ್ಪ್ರೆಸ್ ಗೆ ಮಾತ್ರ ಸೀಮಿತಗೊಳಿಸದೇ ಇತರ ರೈಲುಗಾಡಿಗಳು ಸೇರಿದಂತೆ ಇತರ ಸಾರ್ವಜನಿಕ ಸ್ಥಳಗಳಲ್ಲಿಯೂ ಇಂತಹ ಪ್ರಯತ್ನಗಳನ್ನು ಮಾಡಿದರೆ, ಹೆಚ್ಚು ಹೆಚ್ಚು ಜನರಲ್ಲಿ ದೇಶಭಕ್ತಿ ನಿರ್ಮಾಣವಾಗಲು ಸಹಾಯವಾಗುತ್ತದೆ. |
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ