
ನವ ದೆಹಲಿ : ಅಮೆರಿಕಾದ ಪೌರತ್ವ ಪಡೆದ ಖಲಿಸ್ತಾನಿ ಭಯೋತ್ಪಾದಕ ಗುರುಪತವಂತ್ ಸಿಂಗ್ ಪನ್ನು ಹತ್ಯೆಗೆ ಸರಕಾರಿ ಅಧಿಕಾರಿಗಳ ಜೊತೆ ಸೇರಿ ಸಂಚು ರೂಪಿಸಿದ ಆರೋಪ ಹೊತ್ತಿರುವ ನಿಖಿಲ್ ಗುಪ್ತಾ ಅವರು ತಮ್ಮ ಕುಟುಂಬದ ಮೂಲಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ‘ಅಮೆರಿಕದಿಂದ ನಡೆಯುತ್ತಿರುವ ಹಸ್ತಾಂತರ ಪ್ರಕ್ರಿಯೆಯಲ್ಲಿ ಭಾರತ ಸರಕಾರ ಮಧ್ಯಪ್ರವೇಶಿಸಬೇಕು’, ಎಂದು ಒತ್ತಾಯಿಸಲಾಗಿದೆ. ನಿಖಿಲ್ ಗುಪ್ತಾ ಅವರನ್ನು ಅಕ್ರಮ ಬಂಧನದಲ್ಲಿರಿಸಲಾಗಿದೆ ಮತ್ತು ಅವರ ಜೀವಕ್ಕೆ ಅಪಾಯವಿದೆ’ ಎಂದು ಈ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಭಾರತೀಯ ಪ್ರಜೆ ನಿಖಿಲ್ ಗುಪ್ತಾ ಪ್ರಸ್ತುತ ಚೆಕ್ ರಿಪಬ್ಲಿಕ್ ಜೈಲಿನಲ್ಲಿದ್ದು, ಅಮೇರಿಕಾಗೆ ಹಸ್ತಾಂತರಿಸುವ ಮನವಿಯನ್ನು ತಾತ್ಕಾಲಿಕವಾಗಿ ಅಂಗೀಕರಿಸಲಾಗಿದೆ. ‘ನಿಖಿಲ್ ಗುಪ್ತಾ ಅವರು ಪನ್ನುವನ್ನು ಕೊಲ್ಲಲು ಅಪರಾಧಿ ಹಿನ್ನಲೆಯ ವ್ಯಕ್ತಿಯ ಸಹಾಯವನ್ನು ಕೋರಿದ್ದರು; “ಆದರೆ ಅವರು ಜಾರಿ ನಿರ್ದೇಶನಾಲಯದ ಗೂಢಚಾರರಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಅಮೇರಿಕಾದ ಸರಕಾರಿ ವಕೀಲರು ಹೇಳಿದರು.
ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಭಾರತೀಯ ವಿದೇಶಾಂಗ ಸಚಿವಾಲಯ, “ನಾವು ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸುತ್ತೇವೆ; ಏಕೆಂದರೆ ಅವು ನಮ್ಮ ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುತ್ತವೆ. ಈ ಪ್ರಕರಣದಲ್ಲಿ ಸರಕಾರ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ನೇಮಿಸಿ ತನಿಖೆ ಆರಂಭಿಸಿದೆ.” ಎಂದು ಹೇಳಿದೆ.
🚨 Family of Nikhil Gupta seeks assistance from Supreme Court
🔒 Accused of participating in ‘assassination plot’ of Khalistani terrorist Pannun
🙏 Asks for intervention from Indian authorities
👥 Claim he’s unlawfully held in Czech Republichttps://t.co/dFEy3A3C69
— Swarajya (@SwarajyaMag) December 15, 2023
ರಷ್ಯಾದ ರಾಯಭಾರಿಯನ್ನು ಕರೆಸಿ ತೀವ್ರ ವಿರೋಧಿಸಿದ ಭಾರತ !
ರಷ್ಯಾ: ಕಳೆದ ೬ ತಿಂಗಳುಗಳಲ್ಲಿ ೪೪ ಟನ್ ಚಿನ್ನ ಮಾರಾಟ!
ಪಾಕಿಸ್ತಾನಕ್ಕೆ ನೀಡಲಾಗುವ ಆರ್ಥಿಕ ನೆರವು ಮತ್ತು ಪಾಕಿಸ್ತಾನಿಗಳಿಗೆ ನೀಡಲಾಗುವ ವೀಸಾವನ್ನು ತಡೆಹಿಡಿಯಬೇಕು!
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ಪಾಕ್ ಸೈನ್ಯವು ಕಾರ್ಗಿಲ ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ಮೃತದೇಹಗಳನ್ನು ಹಿಂದೂಗಳ ವಶಕ್ಕೆ ನೀಡಿತು !
ಈ ಹಿಂದೆ ನನ್ನನ್ನು ಬಂಗಾಳದಿಂದ ಹೊರಗಟ್ಟಿದ ನಾಯಕರು ಈಗಲೂ ನನ್ನನ್ನು ಭಾಜಪ ಮತ್ತು ಸಂಘವನ್ನು ಬೆಂಬಲಿಸುವವಳು ಎಂದು ಬಿಂಬಿಸುತ್ತಿದ್ದಾರೆ! : Taslima Nasrin