ಹಿಂದೂಗಳು ಸಂಘಟಿತರಾಗಿ ಬಾಬರಿ ಮಸೀದಿ ಮುಕ್ತ ಮಾಡಿ ರಾಮ ಮಂದಿರ ಕಟ್ಟಬಹುದಾದರೆ ಇತರ ಮಂದಿರಗಳ ನಿರ್ಮಾಣ ಏಕೆ ಸಾಧ್ಯವಿಲ್ಲ ? – ಶ್ರೀ. ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ

500 ಕ್ಕೂ ಹೆಚ್ಚಿನ ದೇವಸ್ಥಾನಗಳ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ದೇವಸ್ಥಾನಗಳ ಪರಿಷತ್ ಪ್ರಾರಂಭ !

ಉದ್ಘಾಟನೆ ಮಾಡುತ್ತಿರುವ (ಎಡದಿಂದ) ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ್ ಶಿಂದೆ, ಆದಿಚುಂಚನ ಗಿರಿ ಮಠದ ಪೂ. ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿ, ಭಾರತೀಯ ಸಂಪ್ರದಾಯ ಟ್ರಸ್ಟ್ ನ ಡಾ. ಮಹರ್ಷಿ ಗುರೂಜಿ, ನ್ಯಾಯವಾದಿ ಅಶೋಕ ಹಾರ‍್ನಹಳ್ಳಿ ಮತ್ತು ಸನಾತನ ಸಂಸ್ಥೆಯ ಪೂ. ರಮಾನಂದ ಗೌಡ

ಬೆಂಗಳೂರು : ಹಿಂದೂಗಳ ಸಂಘಟನೆಯಲ್ಲಿರುವ ಶಕ್ತಿಗೆ ಎಲ್ಲಕ್ಕಿಂತ ದೊಡ್ಡ ಉದಾಹರಣೆಯೆಂದರೆ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ. 2016 ರಲ್ಲಿ ರಾಯಚೂರಿನ ಏಕಮಿನಾರನ ದುರಸ್ಥಿ ಮಾಡುವಾಗ ಅಲ್ಲಿ ದೇವಸ್ಥಾನದ ಕಂಬಗಳು ಕಂಡು ಬಂದಿವೆ ಮತ್ತು ಅದೇ ರೀತಿ ಮಂಗಳೂರೊಂದರ ಮಸೀದಿಯ ನವೀಕರಣ ಮಾಡುವ ಸಂದರ್ಭದಲ್ಲಿ ದೇವಸ್ಥಾನದ ಅವಶೇಷಗಳು ದೊರಕಿವೆ. ಹಿಂದೂ ಸಂಘಟನೆಗಳು ಸಂಘಟಿತರಾಗಿ ಬಾಬರಿ ಮಸೀದಿ ಮುಕ್ತ ಮಾಡಿ ರಾಮ ಮಂದಿರ ನಿರ್ಮಾಣ ಮಾಡುವುದಾದರೆ ಇದೇ ರೀತಿ ಇತರ ಮಂದಿರಗಳನ್ನು ನಿರ್ಮಾಣ ಮಾಡಲು ಏಕೆ ಸಾಧ್ಯವಿಲ್ಲವೆಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆರವರು ಕರ್ನಾಟಕ ರಾಜ್ಯ ಮಟ್ಟದ ದೇವಸ್ಥಾನ ಪರಿಷದ್ ನಲ್ಲಿ ಪ್ರಶ್ನಿಸಿದರು.

ಅವರು ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 16 ಹಾಗೂ 17 ರಂದು ಬೆಂಗಳೂರಿನ ಗಂಗಮ್ಮ ತಿಮ್ಮಯ್ಯ ಕನ್ವೆಂನ್ಷನ್ ಸೆಂಟರ್ ನಲ್ಲಿ ಆಯೋಜಿಸಿದ್ದ ದೇವಸ್ಥಾನಗಳ ರಾಜ್ಯ ಮಟ್ಟದ ಪರಿಷತ್ತಿನಲ್ಲಿ ಮಾತನಾಡಿದರು. ಆದಿಚುಂಚನಗಿರಿ ಮಠದ ಪೂ. ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿ, ಭಾರತೀಯ ಸಂಪ್ರದಾಯ ಟ್ರಸ್ಟ್ ನ ಡಾ. ಮಹರ್ಷಿ ಗುರೂಜಿ, ನ್ಯಾಯವಾದಿ ಅಶೋಕ ಹಾರ‍್ನಹಳ್ಳಿ ಮತ್ತು ಸನಾತನ ಸಂಸ್ಥೆಯ ಪೂ. ರಮಾನಂದ ಗೌಡ ಇವರು ಪರಿಷತ್ತಿನ ಉದ್ಘಾಟನೆ ಮಾಡಿದರು.

ರಾಜ್ಯದ 500 ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಲು ಇಂದೇ ಸಂಕಲ್ಪ ಮಾಡೋಣ ! – ಶ್ರೀ. ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ

ಇಂದು ಪ್ರತಿಯೊಂದು ಕ್ಷೇತ್ರದಲ್ಲಿಯೂ ಅದರದ್ದೇ ಆದ ಶಿಷ್ಟಾಚಾರಗಳು ನಡೆದುಕೊಂಡು ಬರುತ್ತಿದೆ. ಪೊಲೀಸರು, ಸರಕಾರಿ ಕಛೇರಿಗಳು, ಶಾಲೆಗಳು ಸೇರಿದಂತೆ ಅನೇಕ ಕಡೆಗಳಲ್ಲಿ ಈಗ ಅಲ್ಲಿನ ಸಮವಸ್ತ್ರವನ್ನು ಧರಿಸಿಯೇ ಹೋಗಬೇಕಾಗುತ್ತದೆ. ಹೀಗಿರುವಾಗ ಹಿಂದೂ ದೇವಸ್ಥಾನಗಳಿಗೆ ಹೋಗುವಾಗ ನಮ್ಮದೇ ಆದ ವಸ್ತ್ರಸಂಹಿತೆ ಇರಬೇಕು. ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿದರೆ ದರ್ಶನ ಪಡೆಯುವ ಭಕ್ತರಿಗೂ ಅಲ್ಲಿನ ಪೂರ್ಣ ಲಾಭವಾಗುತ್ತದೆ, ಹಾಗಾಗಿ ಮುಂದಿನ ದಿನಗಳಲ್ಲಿ ನಾವೆಲ್ಲರೂ ಒಟ್ಟಾಗಿ ರಾಜ್ಯದ 500 ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಲು ಇಂದೇ ಸಂಕಲ್ಪ ಮಾಡೋಣ ಎಂದರು.

ಸಂತರ ಸಂದೇಶ ವಾಚನ

ಪರಿಷತ್ತಿನ ಪ್ರಾರಂಭದಲ್ಲಿ ಈ ಪರಿಷತ್ತಿನ ನಿಮಿತ್ತವಾಗಿ ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರು ನೀಡಿದ ಸಂದೇಶದ ವಾಚನ ಮಾಡಲಾಯಿತು ಅದೇ ರೀತಿ ಜಗದ್ಗುರು ಶಂಕರಾಚಾರ್ಯ ದಕ್ಷಿಣಾಮ್ನಾಯ ಶೃಂಗೇರಿಯ ಶ್ರೀ ಶಾರದಾ ಪೀಠದ ಶ್ರೀ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಗಳು ಮತ್ತು ರಾಮಚಂದ್ರಾಪುರ ಮಠದ ಶ್ರೀಮಧ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಂದ್ರ ಭಾರತಿ ಸ್ವಾಮೀಜಿಗಳು ನೀಡಿದ ಸಂದೇಶದ ಕಿರುಚಿತ್ರವನ್ನು ತೋರಿಸಲಾಯಿತು.

ಕನ್ನಡ ಭಾಷೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಜಾಲತಾಣ ಲೋಕಾರ್ಪಣೆ !

ಈ ಸುಸಂದರ್ಭದಲ್ಲಿ ಗಣ್ಯರಿಂದ ಹಿಂದೂ ಜನಜಾಗೃತಿ ಸಮಿತಿಯ ಕನ್ನಡ ಭಾಷೆಯ ಜಾಲತಾಣವನ್ನು ಲೋಕಾರ್ಪಣೆ ಮಾಡಲಾಯಿತು. ಇದರಿಂದಾಗಿ ಹಿಂದಿ, ಇಂಗ್ಲಿಷ್ ಮತ್ತು ಮರಾಠಿ ಭಾಷೆಗಳ ನಂತರ ಕನ್ನಡ ಭಾಷೆಯ ಧಾರ್ಮಪ್ರೇಮಿಗಳೂ ರಾಷ್ಟ್ರ ಮತ್ತು ಧರ್ಮದ ಮೇಲೆ ಆಗುವ ಆಘಾತಗಳು, ಹಿಂದೂ ಸಂಘಟನೆ ಇತ್ಯಾದಿಗಳ ಬಗ್ಗೆ ಅವರಿಗೆ ಮಾತೃಭಾಷೆಯಲ್ಲಿ ಮಾರ್ಗದರ್ಶನ ಸಿಗಲು ಸಾಧ್ಯವಾಗುತ್ತದೆ. ಇದರೊಂದಿಗೆ ಜಾಲತಾಣದಿಂದ ಹಮ್ಮಿಕೊಳ್ಳಲಾಗುವ ಜಾಗೃತಿ ಅಭಿಯಾನಗಳಲ್ಲಿ ಅವರು ಸುಲಭವಾಗಿ ಭಾಗವಹಿಸಲು ಸಾಧ್ಯವಾಗುತ್ತದೆ.

ಹಿಂದೂ ಜನಜಾಗೃತಿ ಸಮಿತಿಯ ವೆಬ್‌ಸೈಟ್ 2007 ರಿಂದ ಕಾರ್ಯನಿರ್ವಹಿಸುತ್ತಿದೆ ಮತ್ತು ಕಳೆದ 16 ವರ್ಷಗಳಿಂದ ವಿಶ್ವದಾದ್ಯಂತ ಲಕ್ಷಾಂತರ ಹಿಂದೂಗಳಲ್ಲಿ ಈ ಮೂಲಕ ಜಾಗೃತಿ ಮೂಡಿಸಲಾಗಿದೆ. ಸಹಸ್ರಾರು ಹಿಂದೂಗಳು ಸಹ ಜಾಲತಾಣವನ್ನು ಸಂಪರ್ಕಿಸುವ ಮೂಲಕ ಧರ್ಮಕಾರ್ಯದಲ್ಲಿ ತಮ್ಮ ಕೊಡುಗೆ ನೀಡಲು ಪ್ರಾರಂಭಿಸಿದ್ದಾರೆ. ಇದರ ಅಡಿಯಲ್ಲಿ ವಕೀಲರು, ವೈದ್ಯರು, ಇಂಜಿನಿಯರ್‌ಗಳು, ಪ್ರಾಧ್ಯಾಪಕರು, ಉದ್ಯಮಿಗಳು, ನಿವೃತ್ತ ಸೇನಾಧಿಕಾರಿಗಳು, ವಿದ್ಯಾರ್ಥಿಗಳು ಹೀಗೆ ವಿವಿಧ ಕ್ಷೇತ್ರಗಳಲ್ಲಿ ಹಲವಾರು ಹಿಂದೂಗಳು ಕಾರ್ಯ ಮಾಡುತ್ತಿದ್ದಾರೆ. ಭಾರತ ಮಾತ್ರವಲ್ಲದೆ ನೇಪಾಳ, ಬಾಂಗ್ಲಾದೇಶ, ಶ್ರೀಲಂಕಾ, ಸಿಂಗಾಪುರ, ಥಾಯ್ಲೆಂಡ್, ಮಲೇಷ್ಯಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಜರ್ಮನಿ, ಬ್ರಿಟನ್, ಸ್ವೀಡನ್, ಅಮೆರಿಕಾ, ಕೆನಡಾ ಸೇರಿದಂತೆ ಹಲವು ದೇಶಗಳು ಜಾಲತಾಣವನ್ನು ಸಂಪರ್ಕಿಸಿವೆ. ಇದು ಸಮಿತಿಯ ಕಾರ್ಯದ ಬಗ್ಗೆ ಹಿಂದೂ ಸಮುದಾಯದ ನಂಬಿಕೆಯನ್ನು ತೋರಿಸುತ್ತದೆ.

ಹಿಂದೂ ಜನಜಾಗೃತಿ ಸಮಿತಿಯ ಕನ್ನಡ ಜಾಲತಾಣ Hindujagruti.org/Kannada ಮತ್ತು ‘ಸನಾತನ ಪಂಚಾಂಗ 2024 ಮೊಬೈಲ್ ಆಪ್ ಲೋಕಾರ್ಪಣೆ ಮಾಡಲಾಯಿತು.