ಆಕ್ರೋಶಿತ ಗುಂಪಿನಿಂದ ಪೊಲೀಸರ ಮೇಲೆ ಕಲ್ಲು ತೂರಾಟ !

ಗೋಪಾಲಗಂಜ್ (ಬಿಹಾರ) – ಜಿಲ್ಲೆಯ ದಾನಪುರ ಗ್ರಾಮದಲ್ಲಿ ಅರ್ಚಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತಪಟ್ಟ ಅರ್ಚಕ ಮನೋಜ್ ಕುಮಾರ್ ಎಂದು ಗುರುತಿಸಲಾಗಿದ್ದು ಆತನಿಗೆ 32 ವರ್ಷ ವಯಸ್ಸಾಗಿತ್ತು, ಕುತ್ತಿಗೆಗೆ ಗುಂಡು ಹಾರಿಸಿ ಕಣ್ಣುಗಳನ್ನು ಹೊರತೆಗೆದಿರುವ ಆಘಾತಕಾರಿ ಮಾಹಿತಿ ಲಭಿಸಿದೆ. ಅವರ ಗುಪ್ತಾಂಗಕ್ಕೂ ತೀವ್ರ ಹಾನಿಯಾಗಿದೆ ಎಂದು ಹೇಳಲಾಗಿದೆ.
ಡಿಸೆಂಬರ್ 11ರ ರಾತ್ರಿಯಿಂದ ಮನೋಜ ಕುಮಾರ್ ನಾಪತ್ತೆಯಾಗಿದ್ದರು. ಡಿಸೆಂಬರ್ 16 ರಂದು ಸಮೀಪದ ಪೊದೆಯಲ್ಲಿ ಅವರ ಶವ ಪತ್ತೆಯಾದ ನಂತರ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಆಕ್ರೋಶಗೊಂಡ ಗುಂಪು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 27ಕ್ಕೆ ಅಡ್ಡಿಪಡಿಸಿ ಪೊಲೀಸ್ ವಾಹನವನ್ನು ಧ್ವಂಸಗೊಳಿಸಿದೆ. ಪೊಲೀಸರ ಮೇಲೂ ಗುಂಪು ಕಲ್ಲು ತೂರಾಟ ನಡೆಸಿತು. ಈ ವೇಳೆ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಈ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರದ ಜತೆಗೆ ಅಶ್ರುವಾಯು ಪ್ರಯೋಗಿಸಿದರು. ಮೃತ ಅರ್ಚಕ ಮನೋಜ ಅವರ ಸಹೋದರ ಅಶೋಕ ಕುಮಾರ್ ಅವರು ಬಿಜೆಪಿಯ ಮಾಜಿ ಸರಪಂಚ್ ಮತ್ತು ಮಂಡಲ ಅಧ್ಯಕ್ಷರಾಗಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸಂಪಾದಕೀಯ ನಿಲುವುಬಹುಸಂಖ್ಯಾತ ಹಿಂದೂಗಳ ದೇಶದಲ್ಲಿ ಹಿಂದೂಗಳ ಸಾಧು-ಸಂತರು, ಪುರೋಹಿತರಿಗೆ ರಕ್ಷಣೆಯಿಲ್ಲದಿರುವುದು ಹಿಂದೂಗಳಿಗೆ ನಾಚಿಕೆಗೇಡಿನ ಸಂಗತಿ! ‘ಮುಸ್ಲಿಮರು ಅಪಾಯದಲ್ಲಿದ್ದಾರೆ’ ಎಂದು ಕೂಗಾಡುವವರು ಇಂತಹ ಘಟನೆಗಳ ಸಂದರ್ಭದಲ್ಲಿ ಚಕಾರವನ್ನೂ ಎತ್ತುವುದಿಲ್ಲ, ಇದನ್ನು ಗಮನದಲ್ಲಿಟ್ಟುಕೊಳ್ಳಿ ! |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ