ವರದಿಯನ್ನು ಬಹಿರಂಗ ಪಡಿಸಲು ಹಿಂದೂ ಪಕ್ಷದ ಆಗ್ರಹವಿದ್ದರೆ, ಮುಸ್ಲಿಂ ಪಕ್ಷದ ವಿರೋಧ !

ವಾರಾಣಸಿ (ಉತ್ತರ ಪ್ರದೇಶ) – ಭಾರತೀಯ ಪುರಾತತ್ವ ಇಲಾಖೆಯು ವಾರಾಣಸಿಯ ಜಿಲ್ಲಾ ನ್ಯಾಯಾಲಯದಲ್ಲಿ ಜ್ಞಾನವಾಪಿಯಲ್ಲಿ ನಡೆಸಿದ ಸಮೀಕ್ಷೆಯ ಮೊಹರು ವರದಿಯನ್ನು ಸಲ್ಲಿಸಿದೆ. ವರದಿ ಸಲ್ಲಿಸುವಾಗ ಹಿಂದೂ ಪಕ್ಷದ ಪರ ವಕೀಲ ವಿಷ್ಣು ಶಂಕರ್ ಜೈನ್ ಸೇರಿದಂತೆ ಎಲ್ಲ ಕಕ್ಷಿದಾರರು ನ್ಯಾಯಾಲಯದಲ್ಲಿ ಹಾಜರಾಗಿದ್ದರು. ಈ ವರದಿಯನ್ನು ಬಹಿರಂಗಗೊಳಿಸಬಾರದು ಎಂದು ಮುಸ್ಲಿಂ ಪಕ್ಷ ಆಗ್ರಹಿಸಿದೆ. ಅದಕ್ಕೆ ಹಿಂದೂ ಪಕ್ಷದಿಂದ ಆಕ್ಷೇಪ ವ್ಯಕ್ತವಾಗಿತ್ತು. ಈ ವರದಿಯು ಸುಮಾರು 1 ಸಾವಿರದ 500 ಪುಟಗಳಷ್ಟಿದೆ ಎಂದು ಹೇಳಲಾಗುತ್ತಿದೆ. ‘ಈ ವರದಿಯನ್ನು ಮೊಹರು ಮಾಡಿ ಸಲ್ಲಿಸಬೇಕು’ ಎಂಬ ಬೇಡಿಕೆಯ ಅರ್ಜಿಯನ್ನು ಈಗಾಗಲೇ ಮುಸ್ಲಿಂ ಪಕ್ಷದ ಪರವಾಗಿ ನ್ಯಾಯಾಲಯದಲ್ಲಿ ದಾಖಲಿಸಲಾಗಿತ್ತು.
(ಸೌಜನ್ಯ – News 18 Uttarakhand)
ನವಂಬರ 30 ರಂದು ಜ್ಞಾನವಾಪಿ ಸಮೀಕ್ಷೆ ವರದಿಯನ್ನು ಸಲ್ಲಿಸಲು ಪುರಾತತ್ವ ಇಲಾಖೆ 3 ವಾರಗಳ ಕಾಲಾವಕಾಶ ಕೇಳಿತ್ತು. ಇದಕ್ಕಾಗಿ ನ್ಯಾಯಾಲಯ 10 ದಿನಗಳ ಕಾಲಾವಕಾಶ ನೀಡಿತ್ತು. ಇದಾದ ಬಳಿಕ ಮತ್ತೆ ಸಮಯವನ್ನು ಹೆಚ್ಚಿಸಲಾಯಿತು. ಅಂತಿಮವಾಗಿ ಈ ವರದಿಯನ್ನು ಡಿಸೆಂಬರ್ 18 ರಂದು ನ್ಯಾಯಾಲಯಕ್ಕೆ ಸಲ್ಲಿಸಲಾಯಿತು.
ನ್ಯಾಯಾಲಯದ ಆದೇಶದ ನಂತರ 100 ದಿನಗಳ ಕಾಲ ಜ್ಞಾನವಾಪಿ ಸಮೀಕ್ಷೆ ನಡೆಸಲಾಗಿತ್ತು. ಸಮೀಕ್ಷೆ ವೇಳೆಯಲ್ಲಿ ಹಿಂದೂ ಮತ್ತು ಮುಸ್ಲಿಂ ಎರಡೂ ಪಕ್ಷಗಳ ಪ್ರತಿನಿಧಿಗಳು ಹಾಜರಿದ್ದರು. ಸಮೀಕ್ಷೆಯನ್ನು ಚಿತ್ರೀಕರಿಸಲಾಗಿದೆ.
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!