|

ನವ ದೆಹಲಿ – ಅಮೇರಿಕಾ ವ್ಯವಸ್ಥೆಯಿಂದ ಕೆಲ ದಿನಗಳ ಹಿಂದೆ ಇಲ್ಲಿಯ ಖಲಿಸ್ತಾನಿ ಭಯೋತ್ಪಾದಕ ಗುರುಪತವಂತ ಸಿಂಹ ಪನ್ನು ಇವನ ಹತ್ಯೆಯ ಷಡ್ಯಂತ್ರದಲ್ಲಿ ಭಾರತ ಸರಕಾರದ ಕೈವಾಡವಿರುವ ಗಂಭೀರ ಆರೋಪ ಮಾಡಿತ್ತು. ಇದರ ಸಂದರ್ಭದಲ್ಲಿ ಓರ್ವ ಭಾರತೀಯನನ್ನು ಬಂಧಿಸಲಾಗಿದ್ದು ಇದೆಲ್ಲವೂ ಆರೋಪ ಪತ್ರದಲ್ಲಿ ನಮೂದಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಪ್ರಕರಣದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇವರು ಇದೇ ಮೊದಲ ಬಾರಿ ಹೇಳಿಕೆ ನೀಡಿದ್ದಾರೆ. ಒಂದು ಆಂಗ್ಲ ವಾರ್ತಾಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಪ್ರಧಾನಮಂತ್ರಿಯವರು, ಯಾರಾದರೂ ಈ ಸಂದರ್ಭದಲ್ಲಿ ಸಾಕ್ಷಿ ಒದಗಿಸಿದರೆ ಆಗ ಖಂಡಿತವಾಗಿ ನಾವು ಈ ಪ್ರಕರಣದ ಬಗ್ಗೆ ಗಮನಹರಿಸುವೆವು. ಭಾರತದ ಯಾವುದೇ ಪ್ರಜೆಯಿಂದ ಯಾವುದಾದರೂ ಒಳ್ಳೆಯ ಅಥವಾ ಕೆಟ್ಟ ಘಟನೆ ಘಟಿಸಿದರೆ ಆಗ ನಾವು ಗಮನಹರಿಸುವುದಕ್ಕಾಗಿ ಸಿದ್ಧರಿದ್ದೇವೆ. ಕಾನೂನಿನ ರಾಜ್ಯಕ್ಕಾಗಿ ನಾವು ಬದ್ದರಾಗಿದ್ದೇವೆ ಎಂದು ಹೇಳಿದರು.
ಪ್ರಧಾನಮಂತ್ರಿ ಮೋದಿ ಇವರು ಮಾತು ಮುಂದುವರಿಸಿ, ಹೀಗೆ ಇದ್ದರೂ ವಿದೇಶದಲ್ಲಿ ಆಶ್ರಯ ಪಡೆದಿರುವ ವ್ಯಕ್ತಿಯಿಂದ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿರುವುದರ ಬಗ್ಗೆ ನಮಗೆ ಆತಂಕವಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಇವರಿಂದ ಹಿಂಸಾಚಾರಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ. ಹತ್ಯೆಯ ಷಡ್ಯಂತ್ರದ ಆರೋಪದಿಂದ ಎರಡು ದೇಶಗಳಲ್ಲಿನ ಸಂಬಂಧ ಹದಗೆಡುವ ಸಾಧ್ಯತೆಯನ್ನು ಪ್ರಧಾನಮಂತ್ರಿಯವರು ತಳ್ಳಿ ಹಾಕಿದರು. ಅವರು, ಈ ಪ್ರಕರಣದಿಂದ ಭಾರತ ಮತ್ತು ಅಮೆರಿಕ ಇವರಲ್ಲಿನ ಸಂಬಂಧದ ಮೇಲೆ ಪರಿಣಾಮ ಆಗುವುದಿಲ್ಲ. ಈ ಸಂಬಂಧ ದೃಢವಾಗುವುದಕ್ಕಾಗಿ ಎರಡು ಕಡೆಯಿಂದ ಸಂಪೂರ್ಣ ಸಹಕಾರ ನೀಡಲಾಗುತ್ತಿದೆ. ರಕ್ಷಣೆ ಮತ್ತು ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಸಹಕಾರ ಇದು ನಮ್ಮ ಸ್ನೇಹದ ಮಹತ್ವದ ಅಂಶವಾಗಿದೆ ಎಂದು ಹೇಳಿದರು.
ಅಮೆರಿಕ: ಧರ್ಮದತ್ತ ಒಲವು ತೋರುತ್ತಿರುವ ಜೆನ್-ಜ಼ಿ ಹುಡುಗರು!
ಬ್ರಿಟನ್ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಕನಿಷ್ಕ ನಾರಾಯಣ ಮತ್ತು ಲಿಜಾ ನಂದಿ ಅವರಿಗೆ ಸ್ಥಾನ
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಅಮೆರಿಕದಲ್ಲಿ ಭಾರತ ವಿರೋಧಿ ಖಾಲಿಸ್ತಾನಿಗಳನ್ನು ಕೆಣಕಿದರೆ ಶಿಕ್ಷೆ!
ಜೆನೆರಿಕ್ ಔಷಧಗಳ ಮೇಲೆ ಶೇ.೨೦೦ ರಷ್ಟು ಆಮದು ಸುಂಕ ! – ಟ್ರಂಪ್ ಅವರ ಘೋಷಣೆ : Tax on Indian Drugs
ನೇಪಾಳದ ಹೊಸ ₹1 ನಾಣ್ಯದಿಂದ ವಿವಾದಿತ ನಕ್ಷೆ ತೆರವು : Nepal New Coin Map