ಭಾರತವನ್ನು ಶ್ಲಾಘಿಸಿದ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ !

ಇಸ್ಲಾಮಾಬಾದ್ (ಪಾಕಿಸ್ತಾನ) – ನಮ್ಮ ನೆರೆಹೊರೆಯವರು ಚಂದ್ರನನ್ನು ತಲುಪಿದರು; ಆದರೆ ನಾವು ನೆಲದಿಂದ ಮೇಲೇಳಲೂ ಸಾಧ್ಯವಾಗಿಲ್ಲ. ನಮ್ಮ ಅವನತಿಗೆ ನಾವೇ ಕಾರಣ, ಇಲ್ಲದಿದ್ದರೆ ನಮ್ಮ ದೇಶ ಬೇರೆ ಹಂತಕ್ಕೆ ತಲುಪುತ್ತಿತ್ತು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್ (ಪಿ.ಎಂ.ಎಲ್.ಎನ್.) ಪಕ್ಷದ ನಾಯಕ ನವಾಜ್ ಶರೀಫ್ ಪಕ್ಷದ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡುವಾಗ ಹೇಳಿದರು.
ಶರಿಫ್ ಮಾತನ್ನು ಮುಂದುವರೆಸುತ್ತಾ, 2013 ರಲ್ಲಿ ದೇಶವು ವಿದ್ಯುತ್ ದಟ್ಟಣೆಯ ಬಿಕ್ಕಟ್ಟನ್ನು ಎದುರಿಸುತ್ತಿತ್ತು, ನಾವು ಈ ಬಿಕ್ಕಟ್ಟನ್ನು ಕೊನೆಗೊಳಿಸಿದ್ದೇವು. ಪಾಕಿಸ್ತಾನದಾದ್ಯಂತ ಭಯೋತ್ಪಾದನೆಯನ್ನು ಕೊನೆಗೊಳಿಸಿದೆವು, ಕರಾಚಿಗೆ ಶಾಂತಿಯನ್ನು ತಂದೆವು. (ಶರೀಫ್ ಅವರ ಹಾಸ್ಯ ! – ಸಂಪಾದಕರು) ನಂತರ ಅಭಿವೃದ್ಧಿಯ ಯುಗ ಬಂದಿತು; ಆದರೆ ಈಗಿನ ಹಣದುಬ್ಬರ ನೋಡಿದರೆ ನಾವೇ ನಮ್ಮ ಕಾಲಿಗೆ ಕೊಡಲಿ ಏಟು ಹಾಕಿದ್ದೇವೆ. 2014ರಲ್ಲಿ ನಮ್ಮ ಸರಕಾರದ ಅವಧಿಯಲ್ಲಿ ಹಣದುಬ್ಬರ ಕಡಿಮೆಯಾಗಿತ್ತು. ಆಗ 2 ರೂಪಾಯಿಗೆ ಸಿಗುತ್ತಿದ್ದ ರೊಟ್ಟಿ ಈಗ 30 ರೂಪಾಯಿಗೆ ಸಿಗುತ್ತಿದೆ ಎಂದು ಹೇಳಿದರು.
ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿ ಅಗತ್ಯ!
‘ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾದ ಭಾರತ ತನ್ನ ಜನರ ಸಮಸ್ಯೆಗಳತ್ತ ಗಮನ ಹರಿಸುತ್ತದೆ ಎಂದು ಭಾವಿಸುತ್ತೇವೆ!’
ನ್ಯೂಯಾರ್ಕ್ (ಅಮೇರಿಕ): ಏಷ್ಯನ್ ಮೂಲದ ವ್ಯಕ್ತಿಗಳ ಮೇಲೆ ಚಾಕು ದಾಳಿ!
ಸಿಲಿಗುರಿ ಕಾರಿಡಾರ್ ಈಗ ‘ಚಿಕನ್ ನೆಕ್’ ಆಗಿ ಉಳಿದಿಲ್ಲ, ಬದಲಿಗೆ ‘ಎಲಿಫೆಂಟ್ಸ್ ಟ್ರಂಕ್’ ಆಗಿದೆ!
ಅಮೆರಿಕದಿಂದ ಭಾರತದ ಮೇಲೆ ಶೇ. ೧೦ ರಷ್ಟು ಹೆಚ್ಚುವರಿ ಆಮದು ಸುಂಕ : Import Duty on India
ನಾಗರಿಕ ಅಣು ಒಪ್ಪಂದಕ್ಕಾಗಿ ಸೌದಿ ಅರೇಬಿಯಾ ಇಸ್ರೇಲ್ ಅನ್ನು ಒಪ್ಪಿಗೆ ನೀಡಬೇಕು ! : Recognize Israel