ಶ್ರೀರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ !

ಬೈತುಲ್ (ಮಧ್ಯಪ್ರದೇಶ) – ಶ್ರೀರಾಮ ಮಂದಿರ ನಿರ್ಮಾಣವಾಗುವವರೆಗೆ ಮದುವೆಯಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದ ರವೀಂದ್ರ ಗುಪ್ತಾ ಅಲಿಯಾಸ್ ಭೋಜಪಾಲಿ ಬಾಬಾ ಅವರನ್ನು ಅಯೋಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನೆಗೆ ಆಹ್ವಾನಿಸಲಾಗಿದೆ. ಅವರು ಭೋಪಾಲ್ ನಿವಾಸಿಯಾಗಿದ್ದಾರೆ. 1992 ರಲ್ಲಿ ಬಾಬರಿ ಧ್ವಂಸ ಮಾಡುವಾಗ ಭೋಜಪಾಲಿ ಬಾಬಾ ಅಯೋಧ್ಯೆಗೆ ಹೋಗಿದ್ದರು. ಅವರು 21ನೇ ವಯಸ್ಸಿನಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಕಟ್ಟದ ಹೊರತು ಮದುವೆಯಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಕುಟುಂಬದವರು ಅವರನ್ನು ಮದುವೆಗೆ ಹಲವಾರು ಬಾರಿ ಒಪ್ಪಿಸಲು ಪ್ರಯತ್ನಿಸಿತು; ಆದರೆ ಅವರು ನಿರಾಕರಿಸಿದರು. ಇಂದು ಅವರ ವಯಸ್ಸು 52 ವರ್ಷ. ಕಳೆದ 31 ವರ್ಷಗಳಿಂದ ಸನಾತನ ಧರ್ಮದ ರಕ್ಷಣೆಗಾಗಿ ವಿವಿಧ ಹಿಂದೂ ಸಂಘಟನೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಈಗ ಭೋಜಪಾಲಿ ಬಾಬಾ ಮದುವೆಯಾಗದೆ ತನ್ನ ಉಳಿದ ಜೀವನವನ್ನು ಸನಾತನ ಧರ್ಮಕ್ಕೆ ಮೀಸಲಿಡಲು ನಿರ್ಧರಿಸಿದ್ದಾರೆ.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ