ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ!

ಕ್ಯಾಲಿಫೋರ್ನಿಯಾ (ಅಮೇರಿಕಾ) – ಇಲ್ಲಿನ ಸ್ವಾಮಿನಾರಾಯಣ ದೇವಸ್ಥಾನವನ್ನು ಖಲಿಸ್ತಾನಿಗಳು ಧ್ವಂಸಗೊಳಿಸಿರುವುದನ್ನು ಅಮೆರಿಕದಲ್ಲಿರುವ ಭಾರತೀಯ ಮೂಲದ ಸಂಸತ್ ಸದಸ್ಯರು ಖಂಡಿಸಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಸಂಸದ ರೋ ಖನ್ನಾ ಹೇಳಿದ್ದಾರೆ. ಈ ಘಟನೆಯಿಂದ ಎಲ್ಲರೂ ಒಗ್ಗೂಡಿಸಿದ್ದಕ್ಕೆ ಖುಷಿಯಾಗಿದೆ ಎಂದು ಹೇಳಿದರು.
1. ದೇವಸ್ಥಾನಗಳನ್ನು ಧ್ವಂಸ ಮಾಡುವವರಿಗೆ ಒಗ್ಗಟ್ಟಾಗಿ ಉತ್ತರ ನೀಡಬೇಕು ಎಂದು ಸಂಸದ ರಾಜಾ ಕೃಷ್ಣಮೂರ್ತಿ ಹೇಳಿದರು.
2. ಸಂಸದ ಶ್ರೀ. ಠಾಣೆದಾರ ಇವರು, ಈ ಘಟನೆಯ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಬೇಕು ಎಂದು ಹೇಳಿದರು.
3. ಯಾವುದೇ ರೀತಿಯ ದ್ವೇಷವನ್ನು ಸಹಿಸುವುದಿಲ್ಲ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಹಿಂದೂ ದ್ವೇಷವನ್ನು ಬೇರು ಸಮೇತ ಕಿತ್ತೆಸೆಯಬೇಕು ಎಂದು ಅಮೆರಿಕ ಮೂಲದ ಸಂಸತ್ ಸದಸ್ಯೆ ಬಾರ್ಬರಾ ಲೀ ಹೇಳಿದ್ದಾರೆ.
4. ಈ ಘಟನೆಯಿಂದ ಪೊಲೀಸರಾಗಿ ನಮಗೆ ಬೇಸರವಾಗಿದೆ ಎಂದು ಅಮೇರಿಕಾದ ಪೊಲೀಸರು ಹೇಳಿದ್ದಾರೆ. ಈ ಪ್ರಕಾರವು ಸೂಕ್ತವಲ್ಲ. ಇದನ್ನು ಸಹಿಸುವುದಿಲ್ಲ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದರು.
ಭಾರತದ ಹೊರಗಿನ ಪ್ರತ್ಯೇಕತಾವಾದಿಗಳು ಮತ್ತು ಕಟ್ಟರವಾದಿಗಳಿಗೆ ಆಶ್ರಯ ನೀಡಬಾರದು ! – ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್
ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ ಇವರು ಈ ಘಟನೆಯ ಕುರಿತು, ಇದರಿಂದ ನಾವು ಆತಂಕಗೊಂಡಿದ್ದೇವೆ. ಭಾರತದ ಹೊರಗಿನ ಪ್ರತ್ಯೇಕತಾವಾದಿಗಳು ಮತ್ತು ಕಟ್ಟರವಾದಿಗಳಿಗೆ ಆಶ್ರಯ ನೀಡಬಾರದು. ಈ ಸಂಬಂಧ ಭಾರತದ ವಾಣಿಜ್ಯ ರಾಯಭಾರಿಯು ಅಮೆರಿಕ ಸರಕಾರ ಮತ್ತು ಪೊಲೀಸರಿಗೆ ದೂರು ಸಲ್ಲಿಸಿದೆ. ಘಟನೆಯು ತನಿಖೆಯಲ್ಲಿದೆ ಎಂದು ನಾವು ನಂಬುತ್ತೇವೆ ಎಂದು ಹೇಳಿದರು.
ಭಾರತ, ರಷ್ಯಾ ಮತ್ತು ಚೀನಾ ನಡುವಿನ ದೃಢವಾದ ಸಂಬಂಧ ಜಾಗತಿಕ ಸ್ಥಿರತೆಗೆ ಮುಖ್ಯ! – ಚೀನಾ : China
‘ಡೊಮಿನಿಕನ್ ರಿಪಬ್ಲಿಕ್’ನಲ್ಲಿ ಜೆಟ್ ವಿಮಾನ ಪತನ : ಪೈಲಟ್ ಮತ್ತು ಸಹ-ಪೈಲಟ್ ಸಾವು !
‘ಬ್ರಿಕ್ಸ್’ ಜಾಗತಿಕ ಆರ್ಥಿಕತೆಯ ಹೊಸ ಮಹಾಶಕ್ತಿ ! – ವ್ಲಾಡಿಮಿರ್ ಪುಟಿನ್
ಇರಾನ್-ಇಸ್ರೇಲ್ ನಡುವೆ ಮತ್ತೆ ಭುಗಿಲೆದ್ದ ಯುದ್ಧದ ಕಿಚ್ಚು !
ಫಿಲಿಪೈನ್ಸ್ನಲ್ಲಿ 7.8 ರಿಕ್ಟರ್ ತೀವ್ರತೆಯ ಭೂಕಂಪ : 19 ಜನರ ಸಾವು !
Singapore Blocks Anti-India Content: ಭಾರತೀಯರನ್ನು ಅಪಖ್ಯಾತಿಗೊಳಿಸುವ ಚೀನಿ ನಾಗರಿಕರ ಆನ್ ಲೈನ್ ಅಭಿಯಾನವನ್ನು ಬಯಲಿಗೆಳೆದ ಸಿಂಗಾಪುರ ಸರಕಾರ