ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ!

ಕ್ಯಾಲಿಫೋರ್ನಿಯಾ (ಅಮೇರಿಕಾ) – ಇಲ್ಲಿನ ಸ್ವಾಮಿನಾರಾಯಣ ದೇವಸ್ಥಾನವನ್ನು ಖಲಿಸ್ತಾನಿಗಳು ಧ್ವಂಸಗೊಳಿಸಿರುವುದನ್ನು ಅಮೆರಿಕದಲ್ಲಿರುವ ಭಾರತೀಯ ಮೂಲದ ಸಂಸತ್ ಸದಸ್ಯರು ಖಂಡಿಸಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಸಂಸದ ರೋ ಖನ್ನಾ ಹೇಳಿದ್ದಾರೆ. ಈ ಘಟನೆಯಿಂದ ಎಲ್ಲರೂ ಒಗ್ಗೂಡಿಸಿದ್ದಕ್ಕೆ ಖುಷಿಯಾಗಿದೆ ಎಂದು ಹೇಳಿದರು.
1. ದೇವಸ್ಥಾನಗಳನ್ನು ಧ್ವಂಸ ಮಾಡುವವರಿಗೆ ಒಗ್ಗಟ್ಟಾಗಿ ಉತ್ತರ ನೀಡಬೇಕು ಎಂದು ಸಂಸದ ರಾಜಾ ಕೃಷ್ಣಮೂರ್ತಿ ಹೇಳಿದರು.
2. ಸಂಸದ ಶ್ರೀ. ಠಾಣೆದಾರ ಇವರು, ಈ ಘಟನೆಯ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಬೇಕು ಎಂದು ಹೇಳಿದರು.
3. ಯಾವುದೇ ರೀತಿಯ ದ್ವೇಷವನ್ನು ಸಹಿಸುವುದಿಲ್ಲ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಹಿಂದೂ ದ್ವೇಷವನ್ನು ಬೇರು ಸಮೇತ ಕಿತ್ತೆಸೆಯಬೇಕು ಎಂದು ಅಮೆರಿಕ ಮೂಲದ ಸಂಸತ್ ಸದಸ್ಯೆ ಬಾರ್ಬರಾ ಲೀ ಹೇಳಿದ್ದಾರೆ.
4. ಈ ಘಟನೆಯಿಂದ ಪೊಲೀಸರಾಗಿ ನಮಗೆ ಬೇಸರವಾಗಿದೆ ಎಂದು ಅಮೇರಿಕಾದ ಪೊಲೀಸರು ಹೇಳಿದ್ದಾರೆ. ಈ ಪ್ರಕಾರವು ಸೂಕ್ತವಲ್ಲ. ಇದನ್ನು ಸಹಿಸುವುದಿಲ್ಲ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದರು.
ಭಾರತದ ಹೊರಗಿನ ಪ್ರತ್ಯೇಕತಾವಾದಿಗಳು ಮತ್ತು ಕಟ್ಟರವಾದಿಗಳಿಗೆ ಆಶ್ರಯ ನೀಡಬಾರದು ! – ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್
ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ ಇವರು ಈ ಘಟನೆಯ ಕುರಿತು, ಇದರಿಂದ ನಾವು ಆತಂಕಗೊಂಡಿದ್ದೇವೆ. ಭಾರತದ ಹೊರಗಿನ ಪ್ರತ್ಯೇಕತಾವಾದಿಗಳು ಮತ್ತು ಕಟ್ಟರವಾದಿಗಳಿಗೆ ಆಶ್ರಯ ನೀಡಬಾರದು. ಈ ಸಂಬಂಧ ಭಾರತದ ವಾಣಿಜ್ಯ ರಾಯಭಾರಿಯು ಅಮೆರಿಕ ಸರಕಾರ ಮತ್ತು ಪೊಲೀಸರಿಗೆ ದೂರು ಸಲ್ಲಿಸಿದೆ. ಘಟನೆಯು ತನಿಖೆಯಲ್ಲಿದೆ ಎಂದು ನಾವು ನಂಬುತ್ತೇವೆ ಎಂದು ಹೇಳಿದರು.
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara