
ನವ ದೆಹಲಿ – ಕೇಂದ್ರ ಸರಕಾರ ‘ಮುಸ್ಲಿಂ ಲೀಗ್ ಜಮ್ಮು – ಕಾಶ್ಮೀರ’ (ಮಸರತ್ ಆಲಂ ಗುಂಪು) ಸಂಘಟನೆಯನ್ನು ನಿಷೇಧಿಸಿದೆ. ಈ ಮಾಹಿತಿಯನ್ನು ಗೃಹ ಸಚಿವ ಅಮಿತ್ ಶಾ ಸಾಮಾಜಿಕ ಜಾಲತಾಣಗಳ ಮೂಲಕ ಬಿತ್ತರಿಸಿದ್ದಾರೆ. ‘ದೇಶವಿರೋಧಿ ಚಟುವಟಿಕೆಗಳಿಂದಾಗಿ ಈ ಸಂಘಟನೆಯನ್ನು ರಾಷ್ಟ್ರವಿರೋಧಿ ಚಟುವಟಿಕೆಗಳ ತಡೆ ಕಾಯ್ದೆಯಡಿ ನಿಷೇಧಿಸಲಾಗಿದೆ’ ಎಂದು ಶಾ ಹೇಳಿದರು. ಈ ಸಂಘಟನೆಯನ್ನು ಮಸರತ್ ಆಲಂ ಭಟ್ ಸ್ಥಾಪಿಸಿದ್ದರು. 2019 ರಿಂದ ಅವನು ದೆಹಲಿಯ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದಾನೆ.
ಮಸರತ್ ಆಲಂ ಗುಂಪಿನ ಸದಸ್ಯರು ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಈ ಸದಸ್ಯರು ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಾರೆ, ಜೊತೆಗೆ ಜಮ್ಮು – ಕಾಶ್ಮೀರದಲ್ಲಿ ಇಸ್ಲಾಮಿಕ್ ರಾಜ್ಯವನ್ನು ಸ್ಥಾಪಿಸಲು ಜನರನ್ನು ಪ್ರಚೋದಿಸುತ್ತಾರೆ. ನಮ್ಮ ದೇಶದ ಏಕತೆ, ಸಾರ್ವಭೌಮತೆ ಮತ್ತು ಸಮಗ್ರತೆಗೆ ವಿರುದ್ಧವಾಗಿ ಕೆಲಸ ಮಾಡುವ ಯಾರನ್ನೂ ಬಿಡಲಾಗುವುದಿಲ್ಲ ಮತ್ತು ಕಾನೂನಿನ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂಬ ಸರಕಾರದ ಸಂದೇಶ ಸ್ಪಷ್ಟಪಡಿಸಿದೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ