
ನವ ದೆಹಲಿ – ಕೇಂದ್ರ ಸರಕಾರ ‘ಮುಸ್ಲಿಂ ಲೀಗ್ ಜಮ್ಮು – ಕಾಶ್ಮೀರ’ (ಮಸರತ್ ಆಲಂ ಗುಂಪು) ಸಂಘಟನೆಯನ್ನು ನಿಷೇಧಿಸಿದೆ. ಈ ಮಾಹಿತಿಯನ್ನು ಗೃಹ ಸಚಿವ ಅಮಿತ್ ಶಾ ಸಾಮಾಜಿಕ ಜಾಲತಾಣಗಳ ಮೂಲಕ ಬಿತ್ತರಿಸಿದ್ದಾರೆ. ‘ದೇಶವಿರೋಧಿ ಚಟುವಟಿಕೆಗಳಿಂದಾಗಿ ಈ ಸಂಘಟನೆಯನ್ನು ರಾಷ್ಟ್ರವಿರೋಧಿ ಚಟುವಟಿಕೆಗಳ ತಡೆ ಕಾಯ್ದೆಯಡಿ ನಿಷೇಧಿಸಲಾಗಿದೆ’ ಎಂದು ಶಾ ಹೇಳಿದರು. ಈ ಸಂಘಟನೆಯನ್ನು ಮಸರತ್ ಆಲಂ ಭಟ್ ಸ್ಥಾಪಿಸಿದ್ದರು. 2019 ರಿಂದ ಅವನು ದೆಹಲಿಯ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದಾನೆ.
ಮಸರತ್ ಆಲಂ ಗುಂಪಿನ ಸದಸ್ಯರು ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಈ ಸದಸ್ಯರು ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಾರೆ, ಜೊತೆಗೆ ಜಮ್ಮು – ಕಾಶ್ಮೀರದಲ್ಲಿ ಇಸ್ಲಾಮಿಕ್ ರಾಜ್ಯವನ್ನು ಸ್ಥಾಪಿಸಲು ಜನರನ್ನು ಪ್ರಚೋದಿಸುತ್ತಾರೆ. ನಮ್ಮ ದೇಶದ ಏಕತೆ, ಸಾರ್ವಭೌಮತೆ ಮತ್ತು ಸಮಗ್ರತೆಗೆ ವಿರುದ್ಧವಾಗಿ ಕೆಲಸ ಮಾಡುವ ಯಾರನ್ನೂ ಬಿಡಲಾಗುವುದಿಲ್ಲ ಮತ್ತು ಕಾನೂನಿನ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂಬ ಸರಕಾರದ ಸಂದೇಶ ಸ್ಪಷ್ಟಪಡಿಸಿದೆ.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!