ಹಿಂದುತ್ವನಿಷ್ಠ ಪ್ರಶಾಂತ್ ಪೂಜಾರಿ ಮತ್ತು ದೀಪಕ್ ರಾವ್ ಹತ್ಯೆ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು !

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಬ್ಬರ ತಾಯಂದಿರ ಆಗ್ರಹ

ಮಂಗಳೂರು – 2015 ರ ಗಲಭೆಯಲ್ಲಿ ಪ್ರಶಾಂತ್ ಪೂಜಾರಿ ಮತ್ತು 2019 ರ ಗಲಭೆಯಲ್ಲಿ ದೀಪಕ್ ರಾವ್ ಕೊಲ್ಲಲ್ಪಟ್ಟರು. ಈ ಎರಡೂ ಪ್ರಕರಣಗಳಲ್ಲಿ ಇನ್ನೂ ಅಪರಾಧಿಗಳಿಗೆ ಶಿಕ್ಷೆಯಾಗಿಲ್ಲ. ಈ ಬಗ್ಗೆ ಪ್ರಶಾಂತನ ತಾಯಿ ಯಶೋದಾ ಪೂಜಾರಿ ಹಾಗೂ ದೀಪಕ್ ರಾವ್ ತಾಯಿ ಪ್ರೇಮಾ ರಾವ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹೀಲನ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿದ್ದಾರೆ. ಈ ಮೂಲಕ ಈ ಪ್ರಕರಣಗಳಿಗೆ ವಿಶೇಷ ನ್ಯಾಯಾಲಯ ಸ್ಥಾಪಿಸುವಂತೆ ಒತ್ತಾಯಿಸಿದ್ದಾರೆ.

ಗೌರಿ ಲಂಕೇಶ್ ಮತ್ತು ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ಸ್ಥಾಪನೆಯಾಗಿದೆ !

ಈ ಎರಡೂ ಪ್ರಕರಣಗಳ ತನಿಖೆ ಬಾಕಿಯಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ; ಆದರೆ ನ್ಯಾಯಾಲಯದ ವಿಚಾರಣೆ ನಾವು ನಿರೀಕ್ಷಿಸಿದಷ್ಟು ಬೇಗ ಆಗಲಿಲ್ಲ. ಇತ್ತೀಚೆಗೆ ನಿಯತಕಾಲಿಕೆಗಳ ಮೂಲಕ ಒಂದು ವಿಷಯ ಗಮನಕ್ಕೆ ಬಂದಿದ್ದು, ಗೌರಿ ಲಂಕೇಶ್ ಮತ್ತು ಕಲಬುರ್ಗಿ ಹತ್ಯೆಗೆ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಿದ್ದೀರಿ ಮತ್ತು ತಪ್ಪಿತಸ್ಥರಿಗೆ ಶೀಘ್ರ ಶಿಕ್ಷೆ ವಿಧಿಸುತ್ತೇವೆ ಎಂದು ಭರವಸೆ ನೀಡಿದ್ದೀರಿ, ಇದು ಅತ್ಯಂತ ಶ್ಲಾಘನೀಯವಾಗಿದೆ. ಅದೇ ರೀತಿ ದೀಪಕ್ ರಾವ್ ಮತ್ತು ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣಗಳನ್ನು ವಿಶೇಷ ನ್ಯಾಯಾಲಯದ ಮೂಲಕ ತನಿಖೆ ನಡೆಸಿ ಅಪರಾಧಿಗಳಿಗೆ ಕೂಡಲೇ ಶಿಕ್ಷೆ ನೀಡಿ ನನ್ನ ಮಕ್ಕಳಿಗೆ ನ್ಯಾಯ ದೊರಕಿಸಿಕೊಡುವಂತೆ ಕೋರುತ್ತೇವೆ ಎಂದು ಹೇಳಿದ್ದಾರೆ.