ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗಚಿ ಅವರು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿಯಾಗಿ ನೇಮಕ !

ಅರಿಂದಮ್ ಬಾಗಚಿ

ನವ ದೆಹಲಿ – ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗಚಿ ಅವರನ್ನು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿ ನೇಮಿಸಲಾಗಿದೆ. ಅವರ ಸ್ಥಾನಕ್ಕೆ ರಣಧೀರ್ ಜೈಸ್ವಾಲ್ ಅವರನ್ನು ವಿದೇಶಾಂಗ ಸಚಿವಾಲಯದ ವಕ್ತಾರರನ್ನಾಗಿ ಮಾಡಲಾಗಿದೆ. ಜೈಸ್ವಾಲ್ ಅವರು ಭಾರತೀಯ ವಿದೇಶಾಂಗ ಸೇವೆಯ 1998 ರ ಬ್ಯಾಚ್ ಅಧಿಕಾರಿಯಾಗಿದ್ದಾರೆ. ಜೈಸ್ವಾಲ್ ಇವರು 20 ವರ್ಷಗಳ ವೃತ್ತಿಜೀವನದಲ್ಲಿ ಪೋರ್ಚುಗಲ್, ಕ್ಯೂಬಾ, ದಕ್ಷಿಣ ಆಫ್ರಿಕಾ ಮತ್ತು ನ್ಯೂಯಾರ್ಕ್‌ನಲ್ಲಿ ಭಾರತದ ವತಿಯಿಂದ ಸೇವೆ ಸಲ್ಲಿಸಿದ್ದಾರೆ.