
ನವ ದೆಹಲಿ – ಪೌರತ್ವ ತಿದ್ದುಪಡಿ ಕಾಯ್ದೆಯ ಮೇಲಿನ ಪ್ರಕ್ರಿಯೆಗಳ ಅಧಿಸೂಚನೆಯನ್ನು ಜನವರಿ 26 ರ ಮೊದಲು ಪ್ರಸಾರ ಮಾಡಲಾಗುವುದು. ಕೇಂದ್ರ ಸರಕಾರದ ನಿರ್ಣಯವನ್ನು ಬಾಂಗ್ಲಾದೇಶದಲ್ಲಿರುವ ಹಿಂದೂ ನಿರಾಶ್ರಿತರಿಗೆ ಆಶಾಕಿರಣವಾಗಿದೆ. ಇದರೊಂದಿಗೆ ಪಾಕಿಸ್ತಾನದ ದೌರ್ಜನ್ಯಗಳಿಂದ ಬೇಸತ್ತು ಭಾರತಕ್ಕೆ ಬಂದಿರುವ ಹಿಂದೂ ಮತ್ತು ಸಿಖ್ ನಿರಾಶ್ರಿತರಿಗೆ ಬಹಳ ಸಮಾಧಾನ ಸಿಗಲಿದೆ. ಒಂದು ಅಂಕಿಅಂಶಗಳ ಪ್ರಕಾರ, 2014 ರವರೆಗೆ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ 32 ಸಾವಿರ ನಾಗರಿಕರು ಭಾರತಕ್ಕೆ ಬಂದಿದ್ದಾರೆ.
1. ಸಂಸತ್ತು ಡಿಸೆಂಬರ್ 11, 2019 ರಂದು ಪೌರತ್ವ ತಿದ್ದುಪಡಿ ಕಾಯ್ದೆಗೆ ಒಪ್ಪಿಗೆ ನೀಡಿತ್ತು. ಈ ಕಾನೂನನ್ನು ಜಾರಿಗೆ ತರಲು ನಿಯಮಗಳನ್ನು ರೂಪಿಸುವ ಕಾಲಾವಧಿಯನ್ನು ಸರಕಾರ 8 ಬಾರಿ ವಿಸ್ತರಿಸಿತ್ತು.
2. ಈ ಕಾನೂನಿನ ಅಡಿಯಲ್ಲಿ, ಡಿಸೆಂಬರ್ 31, 2014 ರ ಮೊದಲು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಧಾರ್ಮಿಕ ದೌರ್ಜನ್ಯಗಳಿಗೆ ಬೇಸತ್ತು ಭಾರತಕ್ಕೆ ಬಂದಿರುವ ಹಿಂದೂ, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿ ಮತ್ತು ಕ್ರೈಸ್ತ ಸಮುದಾಯಗಳಿಗೆ ಸೇರಿದ ಜನರಿಗೆ ಪೌರತ್ವ ನೀಡಲಾಗುವುದು.
3. ಅನಧಿಕೃತವಾಗಿ ಭಾರತಕ್ಕೆ ಬಂದಿರುವ ನಿರಾಶ್ರಿತರನ್ನು ಹೊರಹಾಕುವುದಕ್ಕೂ ‘ಸಿಎಎ’ ಕಾನೂನಿಗೂ ಯಾವುದೇ ಸಂಬಂಧವಿಲ್ಲ. ಇದಕ್ಕಾಗಿ ವಿದೇಶಿ ಕಾಯಿದೆ 1946 ಮತ್ತು ಪಾಸ್ ಪೋರ್ಟ್ ಕಾಯಿದೆ 1920 ಈಗಾಗಲೇ ಜಾರಿಯಲ್ಲಿದೆ ಎಂದು ಹೇಳಲಾಗಿದೆ.
Rules for Citizenship Act ready, will be issued much before Lok Sabha polls: Report#CitizenshipAct #LokSabha #CAAhttps://t.co/6oSzfjCHQg
— IndiaToday (@IndiaToday) January 3, 2024
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ