ಜನವರಿ 22 ರಂದು ನಡೆಯಲಿರುವ ಶ್ರೀರಾಮಲಲಾನ ಪ್ರಾಣಪ್ರತಿಷ್ಠಾಪನೆ ಸಮಾರಂಭದ ನಿಮಿತ್ತ…

ಅಯೋಧ್ಯೆ (ಉತ್ತರ ಪ್ರದೇಶ) – ಜನವರಿ 22 ರಂದು ಶ್ರೀ ರಾಮ ಜನ್ಮಭೂಮಿಯಲ್ಲಿ ಶ್ರೀ ರಾಮಲಾಲಾನ ಪ್ರಾಣಪ್ರತಿಷ್ಠಾಪನೆ ಮಾಡಲಾಗುವುದು. ಈ ಐತಿಹಾಸಿಕ ದಿನವು ಹತ್ತಿರವಾಗುತ್ತಿದ್ದಂತೆ, ಕೊಟ್ಯಾಂತರ ಹಿಂದೂಗಳ ಆತೂರತೆ ಮತ್ತು ಉತ್ಸಾಹವು ಹೆಚ್ಚುತ್ತಿದೆ. ಅದೇ ರೀತಿ, ‘ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ನ್ಯಾಸ’ ತನ್ನ ಖಾತೆಯಿಂದ ‘ಎಕ್ಸ್’ ನಲ್ಲಿ ಶ್ರೀರಾಮ ಮಂದಿರದ ಪ್ರವೇಶದ್ವಾರದ ಬಳಿ ಶ್ರೀ ಹನುಮಾನ್, ಗಜರಾಜ, ಸಿಂಹ ಮತ್ತು ಗರುಡನ ವಿಗ್ರಹಗಳ ಚಿತ್ರಗಳನ್ನು ಪ್ರಸಾರ ಮಾಡಿದೆ. ಅವುಗಳನ್ನು ಇತ್ತೀಚೆಗೆ ಸ್ಥಾಪಿಸಲಾಗಿದೆ. ತಿಳಿ ಗುಲಾಬಿ ಬಣ್ಣದ ಈ ವಿಗ್ರಹಗಳು ತುಂಬಾ ಸಾತ್ವಿಕವಾಗಿ ಕಾಣುತ್ತವೆ. ಈ ಕಲ್ಲುಗಳನ್ನು ರಾಜಸ್ಥಾನದ ಬನ್ಸಿಪಹದ್ಪುರ ಗ್ರಾಮದಿಂದ ಅಯೋಧ್ಯೆಗೆ ತರಲಾಗಿತ್ತು. ಈ ಕಲ್ಲನ್ನು ‘ಬಲುವಾ ದಗಡ್’ ಎಂದು ಕರೆಯಲಾಗುತ್ತದೆ.
ಸಿಂಘದ್ವಾರದಿಂದ 32 ಮೆಟ್ಟಿಲುಗಳನ್ನು ಏರುವ ಮೂಲಕ ದೇವಾಲಯವನ್ನು ಪೂರ್ವದಿಂದ ಪ್ರವೇಶಿಸಬಹುದು. ಈ ವಿಗ್ರಹಗಳ ವಿಶೇಷವೆಂದರೆ ಈ ಎಲ್ಲಾ ವಿಗ್ರಹಗಳು ದೇವಾಲಯದ ಮೆಟ್ಟಿಲುಗಳ ಬಳಿ ವಿರಾಜಮಾನವಾಗಿವೆ. ಈ ಕಲಾಕೃತಿಗಳನ್ನು ಬಿಹಾರ, ಉತ್ತರ ಪ್ರದೇಶ ಮತ್ತು ಗುಜರಾತ್ನ ಕುಶಲಕರ್ಮಿಗಳು ತಯಾರಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!