ಯೋಜನೆಗಾಗಿ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಮತ್ತು ಡೆಕ್ಕನ್ ಕಾಲೇಜು ನಡುವೆ ಕರಾರು !

ಪುಣೆ – ಡೆಕ್ಕನ್ ಕಾಲೇಜು ಅಭಿಮತ ವಿದ್ಯಾಪೀಠದಲ್ಲಿ ಕಳೆದ 75 ವರ್ಷಗಳಿಂದ ನಡೆದಿರುವ ಸಂಸ್ಕೃತ ಶಬ್ದಕೋಶ(ನಿಘಂಟು) ಯೋಜನೆಗೆ ಕೇಂದ್ರ ಸರ್ಕಾರದ ನೆರವಿನೊಂದಿಗೆ ಪುನರುಜ್ಜೀವನ ದೊರೆಯಲಿದೆ. ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯ ಮತ್ತು ಇತರ ವಿಶ್ವವಿದ್ಯಾನಿಲಯಗಳು ಈ ಯೋಜನೆಗೆ ಸಹಯೋಗವನ್ನು ನೀಡಲಿದ್ದು, ಯೋಜನೆಗಾಗಿ 29 ಹುದ್ದೆಗಳನ್ನು ಭರ್ತಿ ಮಾಡಲಿದ್ದಾರೆ. ಇಲ್ಲಿಯವರೆಗೆ ಡಿಜಿಟಾಯಝೆಶನ ಮಾಡಿರುವ ದಾಖಲೆಗಳು, ನಿಘಂಟಿನ ವಿಭಾಗಗಳನ್ನು ಸಂಕೇತಸ್ಥಳದಲ್ಲಿ ಎಲ್ಲರಿಗೂ ಲಭ್ಯವಾಗುವಂತೆ ಮಾಡಲಾಗುತ್ತದೆ. ಸಂಸ್ಕೃತ ಶಬ್ದಕೋಶ (ನಿಘಂಟು) ಯೋಜನೆಯ ಕಾರ್ಯ ಅಗಾಧವಾಗಿದ್ದು, ಇನ್ನೆರಡು ತಿಂಗಳಲ್ಲಿ ನಿಘಂಟು ಜನಸಾಮಾನ್ಯರಿಗೆ ಲಭ್ಯವಾಗಲಿದೆ. ಡೆಕ್ಕನ್ ಕಾಲೇಜು ದೇಶಾದ್ಯಂತವಿರುವ ಸಂಸ್ಕೃತ ವಿಭಾಗಗಳಿಗೆ ಇದಕ್ಕಾಗಿ ಮಾರ್ಗದರ್ಶನ ಮಾಡಲಿದೆ. ವಿದ್ಯಾರ್ಥಿಗಳಿಗೆ ಕೆಲಸದ ತರಬೇತಿಗಾಗಿ ಆನ್ಲೈನ್ ಪಠ್ಯಕ್ರಮವನ್ನು ರಚಿಸಲಾಗುವುದು. ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಈ ಯೋಜನೆಗಾಗಿ ಸಹಾಯ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಈ ಯೋಜನೆಯ ಕೆಲಸವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು, ಅಂತರರಾಷ್ಟ್ರೀಯ ಚರ್ಚಾ ಅಧಿವೇಶನವನ್ನು ನಡೆಸಿ, ಅದರಲ್ಲಿ ಈ ಯೋಜನೆಯನ್ನು ಪ್ರಸ್ತುತಪಡಿಸಲಾಗುತ್ತದೆ. ಈ ನಿಘಂಟುವಿನ ಯೋಜನೆಯಲ್ಲಿ ತಂತ್ರಜ್ಞಾನವನ್ನು ಉಪಯೋಗಿಸುವುದರಿಂದ ಕೆಲಸ ಸುಲಭವಾಗಲಿದೆ. ಭವಿಷ್ಯದಲ್ಲಿ ಇತರ ಭಾಷೆಗಳಿಗೂ ಇಂತಹ ಯೋಜನೆಯನ್ನು ಮಾಡಬಹುದಾಗಿದೆ ಎಂದು ರಾಷ್ಟ್ರೀಯ ಶೈಕ್ಷಣಿಕ ತಂತ್ರಜ್ಞಾನ ಒಕ್ಕೂಟದ ಅಧ್ಯಕ್ಷ ಡಾ.ಅನಿಲ ಸಹಸ್ರಬುದ್ಧೆ ನಮೂದಿಸಿದ್ದಾರೆ.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ