ಮಹಾರಾಷ್ಟ್ರದ ನ್ಯಾಯಾಲಯವು ತೀರ್ಪು ನೀಡಿದ್ದರಿಂದ ಗುಜರಾತ ಸರಕಾರಕ್ಕೆ ಶಿಕ್ಷೆಯನ್ನು ಮನ್ನಾ ಮಾಡುವ ಅಧಿಕಾರವಿಲ್ಲ !
ನವ ದೆಹಲಿ – ಗುಜರಾತ ಸರಕಾರ ಆಗಸ್ಟ್ 15, 2023 ರಂದು ಬಿಲ್ಕಿಸ ಬಾನೋ ಸಾಮೂಹಿಕ ಬಲಾತ್ಕಾರ ಪ್ರಕರಣದ 11 ಅಪರಾಧಿಗಳ ಶಿಕ್ಷೆಯನ್ನು ಮನ್ನಾ ಮಾಡುವ ನಿರ್ಣಯವನ್ನು ತೆಗೆದುಕೊಂಡಿತ್ತು. ಈ ನಿರ್ಣಯವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೋ ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಾಲಯವು ಗುಜರಾತ ಸರಕಾರದ ನಿರ್ಣಯವನ್ನು ಅನರ್ಹವೆಂದು ಘೋಷಿಸಿದೆ. ಈ ಪ್ರಕರಣದ ತೀರ್ಪನ್ನು ಮಹಾರಾಷ್ಟ್ರದ ನ್ಯಾಯಾಲಯವು ನೀಡಿರುವುದರಿಂದ ದೋಷಿಗಳ ಶಿಕ್ಷೆಯನ್ನು ಮನ್ನಾ ಮಾಡುವ ಹಕ್ಕು ಗುಜರಾತ ಸರಕಾರಕ್ಕೆ ಇಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಹೇಳಿದೆ.
Bilkis Bano gangrape: Supreme Court quashes Gujarat government’s decision to allow premature release of convicts#SupremeCourt #BilkisBanoCase #Gujarat
Details: https://t.co/jX1UWoOMrf pic.twitter.com/p2zKx8ciX9
— Bar & Bench (@barandbench) January 8, 2024
2002 ರಲ್ಲಿ ಧರ್ಮಾಂಧ ಮುಸಲ್ಮಾನರು ಮಾಡಿದ್ದ ಗೋಧ್ರಾ ಹತ್ಯಾಕಾಂಡದ ನಂತರ ಭುಗಿಲೆದ್ದ ಗಲಭೆಯಲ್ಲಿ 11 ಜನರ ಮೇಲೆ ಬಿಲ್ಕಿಸ್ ಬಾನೋ ಇವರ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಿರುವ ಆರೋಪವಿತ್ತು. ತದನಂತರ ಅವರ ಕುಟುಂಬದ 7 ಜನರ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಈ 11 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಿತ್ತು. ದೂರು ಗುಜರಾತಿನಲ್ಲಿ ದಾಖಲಾಗಿದ್ದರೂ, ಮಹಾರಾಷ್ಟ್ರದಲ್ಲಿ ಈ ಪ್ರಕರಣದಲ್ಲಿ ಆರೋಪಿಗಳ ಮೇಲೆ ಆಲಿಕೆ ನಡೆದು ಅವರಿಗೆ ಶಿಕ್ಷೆಯನ್ನು ವಿಧಿಸಲಾಗಿತ್ತು. ಆದ್ದರಿಂದ ಗುಜರಾತ ಸರಕಾರಕ್ಕೆ ಆರೋಪಿಗಳ ಶಿಕ್ಷೆಯನ್ನು ಮನ್ನಾ ಮಾಡುವ ನಿರ್ಣಯವನ್ನು ತೆಗೆದುಕೊಳ್ಳುವ ಅಧಿಕಾರವಿಲ್ಲ. ಈ ಪ್ರಕರಣದಲ್ಲಿ ನಿರ್ಣಯವನ್ನು ತೆಗೆದುಕೊಳ್ಳುವ ಅಧಿಕಾರ ಮಹಾರಾಷ್ಟ್ರ ಸರಕಾರ ವ್ಯಾಪ್ತಿಗೆ ಬರುತ್ತದೆಯೆಂದು ಸರ್ವೋಚ್ಚ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ನಮೂದಿಸಿದೆ.

FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed