
ಬೆಂಗಳೂರು – ರಾಜ್ಯದ ಕಾಂಗ್ರೆಸ್ ಸರಕಾರ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ದರ್ಶನಕ್ಕಾಗಿ ಹೋಗುವ ರಾಜ್ಯದ ಭಕ್ತರಿಗಾಗಿ ಅಯೋಧ್ಯೆಯಲ್ಲಿ ‘ಕರ್ನಾಟಕ ಯಾತ್ರಿ ನಿವಾಸ’ ನಿರ್ಮಿಸುವುದಾಗಿ ಘೋಷಿಸಿದೆ. ಈ ಯಾತ್ರಿ ನಿವಾಸದಲ್ಲಿ ಭಕ್ತರಿಗೆ ವಸತಿ ಮತ್ತು ಊಟದ ವ್ಯವಸ್ಥೆ ಇರಲಿದೆ. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮುಜರಾಯಿ ಇಲಾಖೆಯು ಉತ್ತರ ಪ್ರದೇಶ ಸರಕಾರಕ್ಕೆ ಪತ್ರವನ್ನು ಬರೆದಿದೆ. ಈ ಯಾತ್ರಿ ನಿವಾಸಕ್ಕಾಗಿ 10 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಿದೆ. ಈ ಯಾತ್ರಿ ನಿವಾಸವನ್ನು ಶರಯೂ ನದಿಯ ಹತ್ತಿರದ 5 ಎಕರೆ ಪ್ರದೇಶದಲ್ಲಿ ನಿರ್ಮಿಸುವುದಾಗಿ ಕರ್ನಾಟಕದ ಧಾರ್ಮಿಕ ದತ್ತಿ ಇಲಾಖೆಯು ತಿಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 2023 ರಲ್ಲಿ ಉತ್ತರ ಪ್ರದೇಶ ಸರಕಾರಕ್ಕೆ ಪತ್ರ ಬರೆದು ಕರ್ನಾಟಕದಿಂದ ಅಯೋಧ್ಯೆಗೆ ಹೋಗುವ ಭಕ್ತರಿಗಾಗಿ ಶರಯೂ ನದಿಯ ಬಳಿ ಯಾತ್ರಿ ನಿವಾಸವನ್ನು ನಿರ್ಮಿಸಲು ಅನುಮತಿ ನೀಡಬೇಕೆಂದು ಕೋರಿದ್ದರು. ಈ ಮೊದಲೂ ಭಾಜಪ ಮುಖಂಡರಾದ ಬಿ.ಎಸ್. ಯಡಿಯೂರಪ್ಪ ಅವರೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಉತ್ತರ ಪ್ರದೇಶ ಸರಕಾರದ ವಸತಿ ನಿರ್ಮಾಣ ಸಂಸ್ಥೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ