ಶ್ರೀರಾಮ ಮಂದಿರದ ಉದ್ಘಾಟನೆಗೆ 55 ದೇಶಗಳ 100 ನಾಯಕರಿಗೆ ಆಹ್ವಾನ

ಅಯೋಧ್ಯೆ (ಉತ್ತರ ಪ್ರದೇಶ) – ಶ್ರೀರಾಮ ಮಂದಿರದ ಉದ್ಘಾಟನೆ ಮತ್ತು ಶ್ರೀ ರಾಮಲಾಲ್ಲಾನ ಪ್ರಾಣಪ್ರತಿಷ್ಠಾಪನೆ ಸಮಾರಂಭದಲ್ಲಿ ದೇಶಾದ್ಯಂತದ 8 ಸಾವಿರ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ. ಇದರೊಂದಿಗೆ 55 ದೇಶಗಳ ಸುಮಾರು 100 ನಾಯಕರನ್ನು ಶ್ರೀರಾಮಮಂದಿರದ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಇದರೊಂದಿಗೆ ಅನೇಕ ದೇಶಗಳ ರಾಯಭಾರಿಗಳು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ವಿಶ್ವ ಹಿಂದೂ ಫೌಂಡೇಶನ ಸಂಸ್ಥಾಪಕ ಮತ್ತು ಜಾಗತಿಕ ಅಧ್ಯಕ್ಷರಾದ ಸ್ವಾಮಿ ವಿಜ್ಞಾನಾನಂದರು ಮಾಹಿತಿ ನೀಡಿದ್ದಾರೆ.