ಅಯೋಧ್ಯೆಯಿಂದ ‘ಸನಾತನ ಪ್ರಭಾತ’ನ ವಿಶೇಷ ವರದಿ

ಅಯೋಧ್ಯೆ – ಅಯೋಧ್ಯೆಯಲ್ಲಿ ಈಗ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣವಾಗಿದೆ. ಆದ್ದರಿಂದ ಹಿಂದೂಗಳು ಈಗ ಸಿದ್ಧರಾಗಿರಬೇಕು; ಏಕೆಂದರೆ ಈಗ ಯಾವುದೇ ಕ್ಷಣದಲ್ಲಿ ಹಿಂದೂ ರಾಷ್ಟ್ರ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಶ್ರೀ ಪಂಚದಶನಾಮ ಜೂನಾ ಆಖಾಡಾದ ಅಂತಾರಾಷ್ಟ್ರೀಯ ಸಂರಕ್ಷಕ ಶ್ರೀ ಮಹಂತ ಹರಿ ಗಿರೀಜಿ ಮಹಾರಾಜರು ಇಲ್ಲಿ ಹೇಳಿದರು. ಮಹಾರಾಜರು ಮತ್ತು ಅವರ ಎಲ್ಲಾ ಭಕ್ತರು ಇಲ್ಲಿನ ಪ್ರಸಿದ್ಧ ಶ್ರೀ ನಾಗೇಶ್ವರನಾಥ ದೇವಸ್ಥಾನಕ್ಕೆ ದರ್ಶನಕ್ಕಾಗಿ ಬಂದಿದ್ದರು. ಆ ಸಮಯದಲ್ಲಿ ಅವರು ಸನಾತನ ಪ್ರಭಾತ ಪ್ರತಿನಿಧಿಯೊಂದಿಗೆ ಮಾತನಾಡುತ್ತಿದ್ದರು. ಶ್ರೀ ಮಹಂತ ಹರಿ ಗಿರೀಜಿ ಮಹಾರಾಜ ಅವರು ಮಾತನಾಡುತ್ತಾ, “ಹಿಂದೂ ರಾಷ್ಟ್ರ ಸ್ಥಾಪನೆಯಾಗಲಿರುವುದರಿಂದ, ಎಲ್ಲಾ ಹಿಂದೂಗಳು ಹಿಂದೂ ರಾಷ್ಟ್ರವನ್ನು ಸ್ವಾಗತಿಸಲು ಸಿದ್ಧರಾಗಿರಬೇಕು. ಮನೆ ಮನೆಗಳಲ್ಲಿ ದೀಪಗಳನ್ನು ಹಚ್ಚಬೇಕು ಹಾಗೆಯೇ ದೊಡ್ಡ ಪ್ರಮಾಣದಲ್ಲಿ ದೀಪೋತ್ಸವವನ್ನು ಆಚರಿಸಬೇಕು.’ ಎಂದು ಹೇಳಿದರು.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ