ರಾಮಮಂದಿರದ ಪ್ರಾಣಪ್ರತಿಷ್ಠಾಪನೆ ದಿನದಂದು ರಿಲಯನ್ಸ್ ಇಂಡಸ್ಟ್ರೀಸ್ ನಿಂದ ರಜೆ ಘೋಷಣೆ

ನವ ದೆಹಲಿ – ಉದ್ಯಮಿ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ತನ್ನ ಎಲ್ಲಾ ಉದ್ಯೋಗಿಗಳಿಗೆ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಶ್ರೀರಾಮಮೂರ್ತಿಯ ಪ್ರಾಣಪ್ರತಿಷ್ಠಾಪನೆಯ ನಿಮಿತ್ತ ರಾಷ್ಟ್ರವ್ಯಾಪಿ ರಜೆ ಘೋಷಿಸಿದೆ.

ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮ್ ಲಲ್ಲಾ ‘ಪ್ರಾಣಪ್ರತಿಷ್ಠಾಪನೆ’ ಸಮಾರಂಭದ ನಿಮಿತ್ತ ದೇಶಾದ್ಯಂತ ಆಚರಿಸಲಾಗುವ ಐತಿಹಾಸಿಕ ಸಮಾರಂಭದಲ್ಲಿ ಸಕ್ರಿಯವಾಗಿ ಭಾಗವಹಿಸಲು ರಿಲಯನ್ಸ್ ಇಂಡಸ್ಟ್ರೀಸ್ ಉದ್ಯೋಗಿಗಳಿಗೆ ಅವಕಾಶವನ್ನು ಒದಗಿಸುವ ಉದ್ದೇಶವನ್ನು ಈ ಕ್ರಮ ಕೈಗೊಂಡಿದೆ