ದಾವಣಗೆರೆಯಲ್ಲಿ ಹಿಂದೂ-ರಾಷ್ಟ್ರ ಅಧಿವೇಶನ !

ದಾವಣಗೆರೆ : ಪ್ರತಿಯೊಬ್ಬ ಹಿಂದೂಗಳು ಧರ್ಮಾಚರಣೆಯನ್ನು ಮಾಡಿ ತಮ್ಮಲ್ಲಿ ಸತ್ವ ಗುಣವನ್ನು ಬೆಳೆಸಿಕೊಳ್ಳಬೇಕು ಮತ್ತು ಮೊದಲು ನಮ್ಮ ಮನಸ್ಸಿನಲ್ಲಿ ಅದರ ನಂತರ ನಮ್ಮ ಕುಟುಂಬದಲ್ಲಿ, ಹಳ್ಳಿ, ಪಟ್ಟಣ, ಜಿಲ್ಲೆ ರಾಜ್ಯ ಮತ್ತು ರಾಷ್ಟ್ರ ಹೀಗೆ ಹಂತಹಂತವಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಕಾರ್ಯ ಆಗಬೇಕು, ಈ ದಿಶೆಯಲ್ಲಿ ಸನಾತನ ಸಂಸ್ಥೆ, ಹಿಂದೂ ಜನಜಾಗೃತಿ ಸಮಿತಿ ಅತ್ಯಂತ ಪ್ರಭಾವಿಯಾಗಿ ಕಾರ್ಯ ಮಾಡುತ್ತಿದೆ. ಇದೇ ಆದರ್ಶವನ್ನು ಎಲ್ಲಾ ಸಂಘಟನೆಗಳು ಇಟ್ಟುಕೊಳ್ಳಬೇಕು, ಎಂದು ಹರಿಹರ ಪುಣ್ಯ ಕೋಟಿ ಆಶ್ರಮದ ಪೂಜ್ಯ ಜಗದೀಶ್ವರ ಸ್ವಾಮಿಗಳು ಪ್ರತಿಪಾದಿಸಿದರು. ಅವರು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ನಗರದ ಶ್ರೀ ನಿಮಿಷಾಂಬ ಸಮುದಾಯ ಭವನದಲ್ಲಿ ಜನವರಿ ೭ ರಂದು ನಡೆದ ಪ್ರಾಂತೀಯ ಹಿಂದೂ-ರಾಷ್ಟ್ರ ಅಧಿವೇಶನದಲ್ಲಿ ಮಾರ್ಗದರ್ಶನ ಮಾಡುತ್ತಿದ್ದರು. ಈ ವೇಳೆ ಹಿಂದುತ್ವನಿಷ್ಠರಾದ ಡಾ. ಎಸ್.ಆರ್. ಹೆಗಡೆ, ನ್ಯಾಯವಾದಿ ರವಿಕುಮಾರ್, ಹಿಂದೂ ರಾಷ್ಟ್ರ ಸೇನಾದ ಶ್ರೀ. ಸಂದೀಪ್ ಗುರೂಜಿ ಮತ್ತು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ಸಮನ್ವಯಕರಾದ ಶ್ರೀ. ಗುರುಪ್ರಸಾದ ಗೌಡ ಮೊದಲಾದ ಗಣ್ಯರು ಉಪಸ್ಥಿತರಿಗೆ ಮಾರ್ಗದರ್ಶನ ಮಾಡಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ