ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಹೇಳಿಕೆ

ನ್ಯೂಯಾರ್ಕ್ (ಅಮೇರಿಕಾ) – ಗಾಜಾದಲ್ಲಿ ಕಳೆದ 109 ದಿನಗಳಿಂದ ನಡೆಯುತ್ತಿರುವ ಯುದ್ಧದಿಂದಾಗಿ 25 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದರಿಂದ ಮಾನವಿಯತೆಯ ಬಿಕ್ಕಟ್ಟು ನಿರ್ಮಾಣವಾಗಿರುವುದರೊಂದಿಗೆ ಹಿಂದೂ ಮಹಾಸಾಗರದ ಮೂಲಕ ನಡೆಯುತ್ತಿರುವ ಸಮುದ್ರ ವ್ಯಾಪಾರಕ್ಕೂ ಧಕ್ಕೆಯಾಗಿದೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಭಾರತದ ಉಪಸ್ಥಾಯಿ ಪ್ರತಿನಿಧಿ ಆರ್. ರವೀಂದ್ರ ಹೇಳಿದರು.
ರವೀಂದ್ರ ತಮ್ಮ ಮಾತನ್ನು ಮುಂದುವರಿಸಿ,
1. ಭಾರತದ ಹತ್ತಿರ ಅನೇಕ ದಾಳಿಗಳು ನಡೆದಿವೆ. ಇದರಿಂದ ಭಾರತದ ಇಂಧನ ಮತ್ತು ಆರ್ಥಿಕ ಹಿತದ ಮೇಲೆ ನೇರ ಪರಿಣಾಮ ಬೀರಿದೆ. ಗಾಜಾದಲ್ಲಿನ ಯುದ್ಧವು ಭೀಕರವಾಗಿದ್ದು, ಈ ಸಂಕಟವನ್ನು ಸ್ಪಷ್ಟವಾಗಿ ಒತ್ತಿ ಹೇಳಬೇಕಾಗಿದೆ.
2. ಪ್ಯಾಲೆಸ್ಟೈನ್ ನಿರಾಶ್ರಿತರಿಗೆ ಭಾರತ ದೊಡ್ಡ ಪ್ರಮಾಣದಲ್ಲಿ ಆರ್ಥಿಕ ನೆರವು ನೀಡಿದೆ. ಭಾರತ ಇದುವರೆಗೆ 5 ದಶಲಕ್ಷ ಅಮೇರಿಕನ್ ಡಾಲರ್ (41.58 ಕೋಟಿ ರೂಪಾಯಿ) ನೆರವು ನೀಡಿದೆ ಎಂದು ಹೇಳಿದರು.
Israel-Hamas war impacting maritime commercial traffic safety in Indian Ocean: India at UNSC pic.twitter.com/M6weZUCOAS
— The Times Of India (@timesofindia) January 24, 2024
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara