Kolhapur Madrasa Demolished : ಕೊಲ್ಲಾಪುರದಲ್ಲಿ ಅಕ್ರಮ ಮದರಸಾ ನಿರ್ಮಾಣ ತೆರವಿಗೆ ಆರಂಭ !

ಹಿಂದುತ್ವನಿಷ್ಠ ಸಂಘಟನೆಗಳ ಆಕ್ರಮಣಕಾರಿ ನಿಲುವಿನ ಪರಿಣಾಮ !

ಕೊಲ್ಲಾಪುರ – ಲಕ್ಷತೀರ್ಥ ವಸಾಹತ್ ನಲ್ಲಿ ಅಕ್ರಮವಾಗಿ ನಿರ್ಮಿಸಿರುವ ಮದರಸಾವನ್ನು ಕೆಡವಲು ಹೋದ ಮಹಾನಗರ ಪಾಲಿಕೆ ಅಧಿಕಾರಿಗಳನ್ನು ಮುಸಲ್ಮಾನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ವಿರೋಧಿಸಿದ್ದರು. ಇದರೊಂದಿಗೆ ಮುಸ್ಲಿಂ ಸಮುದಾಯದವರು ಮುಸ್ಲಿಂ ಮಹಿಳೆಯರನ್ನು ಮುಂದೆ ಕಳಿಸುವ ಮೂಲಕ ಒತ್ತಡ ಹೇರಲು ಪ್ರಯತ್ನಿಸಿದರು ಮತ್ತು ನಗರಸಭೆ ಎದುರು ಪ್ರತಿಭಟನೆ ನಡೆಸಿದರು. ಇದರಿಂದಾಗಿ ಜ.31ರಂದು ನಗರಸಭೆ ಈ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ.

ಈ ಹಿನ್ನೆಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಬಳಿ ಹಿಂದುತ್ವನಿಷ್ಠ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕೊನೆಗೆ ವಿವಿಧ ಹಿಂದುತ್ವನಿಷ್ಠ ಸಂಘಟನೆಗಳ ಆಕ್ರಮಣಕಾರಿ ನಿಲುವಿನಿಂದಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಸ್ಲಿಂ ಬಾಂಧವರು ಅಕ್ರಮ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದರು. ಅವರು ಫೆಬ್ರವರಿ 1 ರ ಬೆಳಿಗ್ಗೆಯಿಂದ ತೆರವುಗೊಳಿಸುವ ಕೆಲಸ ಪ್ರಾರಂಭಿಸಿದರು. ಈ ವೇಳೆ ನಗರದಾದ್ಯಂತ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿಯ ಬಳಿ ಪ್ರತಿಭಟನೆ ಮಾಡುತ್ತಿರುವವರನ್ನು ಉದ್ದೇಶಿಸಿ ಮಾತನಾಡುತ್ತಿರುವಾಗ ಶ್ರೀ. ರಮೇಶ ಶಿಂದೆ