(ಸಮನ್ಸ್ ಅಂದರೆ ಒಬ್ಬ ವ್ಯಕ್ತಿಗೆ ನಿರ್ದಿಷ್ಟ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ನೀಡಲಾದ ನೋಟೀಸ್)

ಬೆಂಗಳೂರು – ‘ನಾವು ಡೆಂಗ್ಯೂ, ಸೊಳ್ಳೆ, ಮಲೇರಿಯಾವನ್ನು ವಿರೋಧಿಸಲು ಸಾಧ್ಯವಿಲ್ಲ ಮತ್ತು ಅವುಗಳನ್ನು ಕೊನೆಗೊಳಿಸಬೇಕು. ಹಾಗೆಯೇ ಸನಾತನವನ್ನೂ ಕೊನೆಗಾಣಿಸಬೇಕಾಗಿದೆ‘, ಎಂದು ಹೇಳಿಕೆ ನೀಡಿದ್ದ ತಮಿಳುನಾಡಿನ ಸಚಿವ ಹಾಗೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ ಪರಮೇಶ ಎಂಬುವವರ ದೂರಿನ ಮೇರೆಗೆ ಸಮನ್ಸ್ ಜಾರಿ ಮಾಡಲಾಗಿದೆ. ಮಾರ್ಚ್ ೪ ರಂದು ನಡೆಯುವ ವಿಚಾರಣೆಗೆ ಹಾಜರಾಗಲು ಉದಯನಿಧಿ ಅವರಿಗೆ ನ್ಯಾಯಾಲಯ ಹೇಳಿದೆ.
ಈ ಸಂದರ್ಭದಲ್ಲಿ ಪರಮೇಶ ಪರ ವಕೀಲ ಧರಂಪಾಲ ಮಾತನಾಡಿ, ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ವಿರೋಧಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಹೇಳಿಕೆ ಎಲ್ಲೆಡೆ ವ್ಯಾಪಕ ಪ್ರಚಾರ ಪಡೆದಿತ್ತು. ಅವರು ತಮ್ಮ ಹೇಳಿಕೆಗೆ ಬದ್ದರಾಗಿದ್ದಾರೆ. ಅವರು ನ್ಯಾಯಾಲಯವನ್ನು ಎದುರಿಸಬೇಕಾಗಬಹುದು. ಅಯೋಧ್ಯೆಯಲ್ಲಿ ಶ್ರೀರಾಮಮಂದಿರದ ಉದ್ಘಾಟನೆಯಿಂದಾಗಿ ಹಿಂದೂ ಧರ್ಮದ ಬಗ್ಗೆ ಭಕ್ತಿ, ಶ್ರದ್ಧೆ ಹಾಗೂ ಜಾಗೃತಿ ಹೆಚ್ಚಾಗಿದೆ. ಆದ್ದರಿಂದ ಇಂತಹ ಹೇಳಿಕೆಗಳು ಹಿಂದೂಧರ್ಮ ಆಚರಿಸುವವರಿಗೆ ಮತ್ತು ಇತರ ಕೆಲವು ಧರ್ಮಗಳ ಜನರ ಭಾವನೆಗಳಿಗೆ ಧಕ್ಕೆ ತರುತ್ತಿವೆ ಎಂದು ಹೇಳಿದ್ದಾರೆ.
42nd ACM Court in Bengaluru summons Tamil Nadu Minister Udhayanidhi Stalin to appear on March 4 over his remark in which he allegedly compared Sanatana Dharma with Dengue and Malaria. Summons have also been issued to the persons who organised the program.
(File pic) pic.twitter.com/piKHMu29Uj
— ANI (@ANI) February 2, 2024
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ