ಶ್ರೀ ಗಣೇಶ ಜಯಂತಿ (೧೩ ಫೆಬ್ರವರಿ)

ಶ್ರೀ ಗಣೇಶ ಜಯಂತಿ ಎಂದರೆ ಯಾವ ದಿನ ಗಣೇಶ ಲಹರಿಗಳು ಪ್ರಥಮ ಬಾರಿ ಪೃಥ್ವಿಯ ಮೇಲೆ ಬಂದವೋ, ಅಂದರೆ ಯಾವ ದಿನ ಗಣೇಶನ ಜನ್ಮವಾಯಿತೋ, ಆ ದಿನ. ಅದು ಮಾಘ ಶುಕ್ಲ ಚತುರ್ಥಿಯಾಗಿತ್ತು. ಅಂದಿನಿಂದ ಶ್ರೀ ಗಣೇಶ ಜಯಂತಿಯನ್ನು ಆಚರಿಸಲಾಗುತ್ತದೆ. ಈ ದಿನದ ವೈಶಿಷ್ಟ್ಯವೇನೆಂದರೆ, ಈ ತಿಥಿಯಂದು ಶ್ರೀ ಗಣೇಶನ ತತ್ತ್ವವು ಇತರ ದಿನಗಳ ತುಲನೆಯಲ್ಲಿ ೧ ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ.
ಶ್ರೀ ಗಣೇಶ ಜಯಂತಿಯ ಮಹತ್ವವೇನು ?
ಗಣಪತಿಯ ಸ್ಪಂದನಗಳು ಮತ್ತು ಪೃಥ್ವಿಯ ಚತುರ್ಥಿ ತಿಥಿಯ ಸ್ಪಂದನಗಳು ಒಂದೇ ರೀತಿಯದ್ದಾಗಿರುತ್ತವೆ, ಆದುದರಿಂದ ಅವುಗಳು ಒಂದಕ್ಕೊಂದು ಅನುಕೂಲವಾಗಿರುತ್ತವೆ; ಅಂದರೆ ಆ ದಿನ ಗಣಪತಿಯ ಸ್ಪಂದನಗಳು ಹೆಚ್ಚಿನ ಪ್ರಮಾಣದಲ್ಲಿ ಪೃಥ್ವಿಯ ಮೇಲೆ ಬರಬಹುದು. ಪ್ರತಿ ತಿಂಗಳ ಚತುರ್ಥಿಯ ದಿನ ಗಣಪತಿಯ ತತ್ತ್ವವು ಇತರ ದಿನಗಳ ತುಲನೆಯಲ್ಲಿ ಪೃಥ್ವಿಯ ಮೇಲೆ ೧೦೦೦ ಪಟ್ಟು ಹೆಚ್ಚಿಗೆ ಕಾರ್ಯನಿರತವಾಗಿರುತ್ತದೆ. ಈ ತಿಥಿಯಂದು ಶ್ರೀ ಗಣೇಶನ ಉಪಾಸನೆಯನ್ನು ಮಾಡಿದರೆ ಗಣೇಶತತ್ತ್ವದ ಲಾಭವು ಹೆಚ್ಚಿಗೆ ಆಗುತ್ತದೆ.
ಸಾಧ್ಯವಾದರೆ ಹತ್ತಿರದ ಗಣಪತಿಯ ದೇವಸ್ಥಾನಕ್ಕೆ ಹೋಗಿ ನಾಮ ಜಪಿಸಿ. ದೇವಸ್ಥಾನಕ್ಕೆ ಹೋಗಲು ಸಾಧ್ಯವಿಲ್ಲದಿದ್ದರೆ, ಮನೆಯಲ್ಲಿಯೇ ಆದಷ್ಟು ಹೆಚ್ಚು ಗಣಪತಿಯ ನಾಮ ಜಪಿಸಿ ಮತ್ತು ಪ್ರಾರ್ಥನೆ ಮಾಡಿ.
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !
ಆಭರಣಗಳನ್ನು ಉಪಯೋಗಿಸುವ ಮಹತ್ವ
ಅಕ್ಷಯ ತದಿಗೆಯ ದಿನ ಪುಣ್ಯವನ್ನು ಹೇಗೆ ಪಡೆಯುವಿರಿ ?
ಅಕ್ಷಯ ತದಿಗೆಯ ಶುಭ ಮುಹೂರ್ತದ ಮಹತ್ವ !