ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಮಂತ್ರಿಗಳೊಂದಿಗೆ ಶ್ರೀ ರಾಮಲಲ್ಲಾನ ದರ್ಶನ ಪಡೆದರು !

ಅಯೋಧ್ಯೆ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶಾಸಕರು ಮತ್ತು ಸಚಿವರೊಂದಿಗೆ ಇಲ್ಲಿನ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಶ್ರೀರಾಮಲಲ್ಲಾನ ದರ್ಶನ ಪಡೆದರು. ಎಲ್ಲ ಶಾಸಕರು ಮತ್ತು ಸಚಿವರು ಬೆಳಗ್ಗೆ 9 ಗಂಟೆಗೆ ಲಕ್ಷ್ಮಣಪುರಿಯಿಂದ ಬಸ್ಸಿನಲ್ಲಿ ಅಯೋಧ್ಯೆಗೆ ತೆರಳುತ್ತಿದ್ದರು. ಅಯೋಧ್ಯೆ ತಲುಪಿದ ಅವರನ್ನು ಸ್ವಾಗತಿಸಲಾಯಿತು.