
ಪುಣೆ – ಯೆರವಡಾ ಮಧ್ಯವರ್ತಿ ಕಾರಾಗೃಹದಲ್ಲಿ ಗಂಭೀರ ಅಪರಾಧಕ್ಕಾಗಿ ಶಿಕ್ಷೆಯನ್ನು ಅನುಭವಿಸುತ್ತಿರುವ ಕೈದಿಗಳ ಗುಂಪು ಶೇರಖಾನ ಪಠಾಣ ಎಂಬ ಹೆಸರಿನ ಜೈಲು ಅಧಿಕಾರಿಯು ಕರ್ತವ್ಯ ನಿರ್ವಹಿಸುತ್ತಿರುವಾಗ ಮುಷ್ಟಿಯಿಂದ, ಕಾಲಿನಿಂದ ಒದ್ದು ಥಳಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೊಡೆದಾಟ ಮಾಡಿರುವ ಕೈದಿಗಳು ಕುಖ್ಯಾತ ಅಪರಾಧಿ ಆಂದೇಕರ ಗುಂಪಿನ ಸದಸ್ಯರಾಗಿರುವುದು ತಿಳಿದಿದೆ. ಕೆಲವು ಕೈದಿಗಳು ಕಾರ್ಯಾಲಯದಲ್ಲಿದ್ದ ಕುರ್ಚಿಗಳನ್ನು ಎತ್ತಿ ಆ ಅಧಿಕಾರಿಯ ಮೇಲೆ ಎಸೆದು ಥಳಿಸಲು ಪ್ರಯತ್ನಿಸಿದರು; ಆದರೆ ಅಲ್ಲಿದ್ದ ಇತರ ಕೈದಿಗಳು ಅವರನ್ನು ತಡೆದರು. ಕೈದಿಗಳ ಥಳಿತದಲ್ಲಿ ಅಧಿಕಾರಿಯ ಕಣ್ಣಿಗೆ ಗಾಯವಾಗಿದ್ದು, ಎಡಗೈಯ ಮಣಿಕಟ್ಟಿನ ಎಲುಬು ಮುರಿದಿದೆ(ಫ್ರ್ಯಾಕ್ಚರ). ಜೈಲು ಅಧಿಕಾರಿಯು ಕೆಟ್ಟ ಶಬ್ದಗಳಿಂದ ಬೈದಿರುವ ಬಗ್ಗೆ ಕೈದಿಗಳು ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ವಿಕಿ ಕಾಂಬಳೆ, ಪ್ರಕಾಶ ರೇಣುಸೆ ಮತ್ತು ಇನ್ನೂ 10 ಕೈದಿಗಳ ವಿರುದ್ಧ ಯೆರವಾಡಾ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸುವ ಕೆಲಸ ನಡೆಯುತ್ತಿದೆ.
ಆಡಳಿತವು ತಕ್ಷಣ ದೊಡ್ಡ ಪ್ರಮಾಣದಲ್ಲಿ ಪೊಲೀಸರನ್ನು ನಿಯೋಜಿಸಿದ್ದು, ಹೊಡದಾಡಿದ ಕೈದಿಗಳನ್ನು ಪ್ರತ್ಯೇಕ ಕೋಣೆಯಲ್ಲಿ ಇರಿಸಲಾಗಿದೆ. ಯೆರವಡಾ ಪೊಲೀಸರು ಜೈಲಿಗೆ ಹೋಗಿ ಘಟನೆಯ ಸವಿಸ್ತಾರ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ.
ಸಂಪಾದಕೀಯ ನಿಲುವುಕಳೆದ ಕೆಲವು ದಿನಗಳಿಂದ ಪುಣೆಯಲ್ಲಿ ಅಪರಾಧ ಪ್ರಕರಣಗಳು ಉತ್ತುಂಗಕ್ಕೆರಿವೆ. ಇದನ್ನು ಗಮನಿಸಿದಾಗ ಅಪರಾಧಿಗಳಿಗೆ ಪೊಲೀಸರ ಭಯವೇ ಇಲ್ಲದಂತಾಗಿರುವುದು ಸ್ಪಷ್ಟವಾಗುತ್ತಿದೆ. ಇದು ಪೊಲೀಸರಿಗೆ ನಾಚಿಕೆಗೇಡು ! |
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ