ಯೋಗಿ ಸರ್ಕಾರ ಹಾಗೂ ಮೆಟ್ರೊ ಆಡಳಿತದ ಶ್ಲಾಘನೀಯ ನಿರ್ಧಾರ

ಆಗ್ರಾ (ಉತ್ತರ ಪ್ರದೇಶ) – ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ ೨೮ ರಂದು ಮಂಕಮೇಶ್ವರ ಮೆಟ್ರೋ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಲ್ಲಿನ ಜಾಮಾ ಮಸೀದಿ ಮೆಟ್ರೋ ನಿಲ್ದಾಣದ ಹೆಸರನ್ನು ಬದಲಾಯಿಸಲಾಗಿದೆ. ಈಗ ಅದಕ್ಕೆ ‘ಮಂಕಮೇಶ್ವರ ಮೆಟ್ರೊ ನಿಲ್ದಾಣ’ ಎಂದು ಮರುನಾಮಕರಣ ಮಾಡಲಾಗಿದೆ. ಆಗ್ರಾದ ಜನರು ಯೋಗಿ ಸರ್ಕಾರ ಮತ್ತು ’ಉತ್ತರ ಪ್ರದೇಶ ಮೆಟ್ರೋ ರೈಲು ನಿಗಮ’ (ಯು.ಪಿ.ಎಂ.ಆರ್.ಸಿ.)ದ ಬಳಿ ಈ ಬಗ್ಗೆ ಮನವಿ ಮಾಡಿದ್ದರು. ಇದರಿಂದಾಗಿ ರಾಜ್ಯ ಸರ್ಕಾರವು ಜಾಮಾ ಮಸೀದಿ ಮೆಟ್ರೋ ನಿಲ್ದಾಣದ ಹೆಸರನ್ನು ಬದಲಾಯಿಸಲು ಆದೇಶಿಸಿತ್ತು. ಅನಂತರ, ’ಯು.ಪಿ.ಎಂ.ಆರ್.ಸಿ.’ಯ ಅಧಿಕಾರಿಗಳು ಜಾಮಾ ಮಸೀದಿ ನಿಲ್ದಾಣದಲ್ಲಿ ’ಮಂಕಮೇಶ್ವರ ಮೆಟ್ರೋ ನಿಲ್ದಾಣ’ ಎಂಬ ಫಲಕ ಹಾಕಿದ್ದಾರೆ’ ಎಂದು ’ಉತ್ತರ ಪ್ರದೇಶ ಮೆಟ್ರೋ ರೈಲು ನಿಗಮ’ ದ ಉಪಮಹಾವ್ಯವಸ್ಥಾಪಕರಾದ ಶ್ರೀ. ಪಂಚಾನನ ಮಿಶ್ರಾ ರವರು ತಿಳಿಸಿದ್ದಾರೆ.
ಆಗ್ರಾದಲ್ಲಿನ ರಾವತಪಾಡಾ ಪರಿಸರದಲ್ಲಿನ ಮಂಕಮೇಶ್ವರ ಎಂಬ ಪುರಾತನ ಶಿವನ ದೇವಾಲಯವಿದೆ. ಆ ಜಾಗದಲ್ಲಿ ಹೊಸ ನಿಲ್ದಾಣ ನಿರ್ಮಾಣವಾಗುತ್ತಿರುವುದರಿಂದ ‘ಮಂಕಮೇಶ್ವರ ಮೆಟ್ರೊ ನಿಲ್ದಾಣ’ ಎಂದು ನಾಮಕರಣ ಮಾಡಬೇಕು ಎಂದು ಇಲ್ಲಿನ ಜನರು ಮನವಿ ಮಾಡಿದ್ದರು. ಕಳೆದ ವರ್ಷ ಜುಲೈನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ರವರು ಮೆಟ್ರೋ ಯೋಜನೆಯ ಪರಿಶೀಲನೆಗಾಗಿ ಆಗ್ರಾಗೆ ಬಂದಿದ್ದರು. ಅನಂತರ ಅವರು ನಿಲ್ದಾಣದ ಹೆಸರನ್ನು ಬದಲಾಯಿಸುವುದಾಗಿ ಘೋಷಿಸಿದ್ದರು.
Agra’s Jama Masjid Metro Station Renamed to Mankameshwar Metro Stationhttps://t.co/jRs2iV0o5J#JamaMasjid #mankameshwar #YogiAdityanath #adityanath #UttarPradesh
— Republic (@republic) February 20, 2024
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !