
ಬೆಂಗಳೂರು – ರಾಜ್ಯಸಭಾ ಚುನಾವಣೆಯ ವಿಜಯೋತ್ಸವದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಕೇಳಿಬರುತ್ತಿರುವಾಗಲೇ ಇದೀಗ ಮುಸ್ಲಿಮರು ನಡುರಸ್ತೆಯಲ್ಲಿ ನಮಾಜ ಪಠಣ ಮಾಡುತ್ತಿರುವುದು ವರದಿಯಾಗಿದೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಸಿದ್ದಾಪುರದಲ್ಲಿ ಅತೀಕ್ ಮಸೀದಿ ಬಳಿಯ ರಸ್ತೆಯಲ್ಲಿ ಮುಸ್ಲಿಮರು ನಮಾಜ್ ಮಾಡುತ್ತಿರುವ ಚಿತ್ರಗಳು ಪ್ರಸಾರವಾಗಿವೆ. ಈ ಸಂಬಂಧ ಹಿಂದುತ್ವನಿಷ್ಠ ಕಾರ್ಯಕರ್ತ ತೇಜಸ್ ಗೌಡ ನೀಡಿದ ದೂರಿನ ಮೇರೆಗೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ನಡು ರಸ್ತೆಯಲ್ಲಿ ನಮಾಜ್ ಮಾಡಿದ ಮುಸ್ಲಿಮರು; ಹಿಂದೂಪರ ಹೋರಾಟಗಾರನಿಂದ ದೂರು ದಾಖಲು#Bengaluru #Muslims #namaz #Chickpethttps://t.co/4Y3qKYL9Yq
— TV9 Kannada (@tv9kannada) February 29, 2024
ಅತೀಕ್ ಮಸೀದಿ ಬಳಿ ಮುಸ್ಲಿಮರು ನಡುರಸ್ತೆಯಲ್ಲಿ ಕುಳಿತು ನಮಾಜ್ ಮಾಡಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಯಿತು. ಸಂಚಾರವ್ಯವಸ್ಥೆ ಸ್ಥಗಿತವಾಗಿತ್ತು. ಸಾರ್ವಜನಿಕವಾಗಿ ನಮಾಜ್ ಮಾಡುವುದು ಕಾನೂನು ಬಾಹಿರವಾಗಿದೆ. ಮುಸ್ಲಿಮರ ಈ ಕೃತ್ಯ ಇತರ ಧರ್ಮೀಯರ ಭಾವನೆಗಳಿಗೆ ಅಗೌರವ ತೋರಿದಂತೆ ಇದೆ. ಈ ಅಕ್ರಮ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತೇಜಸ್ ಗೌಡ ಇವರು ದೂರಿನ ಮೂಲಕ ಆಗ್ರಹಿಸಿದ್ದಾರೆ.
ಸಂಪಾದಕೀಯ ನಿಲುವುಅಪರಾಧ ದಾಖಲಿಸಿ ತೋರಿಕೆಯ ಪ್ರಯತ್ನ ಮಾಡುವ ಪೊಲೀಸರು ! ಸಂಬಂಧಪಟ್ಟವರ ವಿರುದ್ಧ ನೇರವಾಗಿ ಕ್ರಮ ಕೈಗೊಳ್ಳಲು ಪೊಲೀಸರು ಧೈರ್ಯ ಮಾಡಿದರೆ ಮಾತ್ರ ಸುದ್ದಿಯಾಗುತ್ತದೆ ಎಂದು ತಿಳಿಯಿರಿ ! |
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ